Latest

ಮಗಳು ಮತ್ತು ತಾಯಿ ಇಬ್ಬರ ಜೊತೆಯು ಸಂಬಂಧ ಹೊಂದಿದ್ದ ಯುವಕನನ್ನು ಕುಟುಂಬಸ್ಥರು ಹೊಡೆದು ಕೊಂದರು.

ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ಚಾಲಕನಾಗಿದ್ದ ಅಯಾನ್ ಮಂಡಲ್ ತನ್ನ ಗೆಳತಿ ಹಾಗೂ ಆಕೆಯ ತಾಯಿಯೊಂದಿಗೂ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ವಿಜಯ ದಶಮಿ ನಿಮಿತ್ತ ಬುಧವಾರ ಸಂಜೆ ತನ್ನ ಗೆಳತಿಗೆ ಕರೆ ಮಾಡಿ ಸಂಪರ್ಕ ಸಾಧಿಸಲು ಯತ್ನಿಸಿದ್ದರು. ಆದರೆ, ಗೆಳತಿ ಪದೇ ಪದೆ ಕರೆಗಳನ್ನು ಕಡಿತಗೊಳಿಸಿದ್ದರು. ಇದರಿಂದ ಮಂಡಲ್​ ನಶೆಯಲ್ಲಿ ತನ್ನ ಗೆಳತಿ ಮನೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.

ಮನೆಗೆ ತಲುಪಿದ ಬಳಿಕ ಗೆಳತಿಯ ತಾಯಿಯೊಂದಿಗೆ ಮಂಡಲ್​ ಜಗಳ ಮಾಡಿದ್ದಾರೆ. ಅಲ್ಲದೇ, ಆಕೆ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಆಗ ತಕ್ಷಣವೇ ಗೆಳತಿ ಹಾಗೂ ಆಕೆಯ ಸಹೋದರ ಮತ್ತು ತಂದೆ ಬಂದಿದ್ದಾರೆ. ಇದರಿಂದ ಈ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಂಡಲ್​ ತಲೆಗೆ ಸಹೋದರ ಭಾರವಾದ ವಸ್ತುವಿನಿಂದ ಹೊಡೆದಿದ್ದಾರೆ. ಪರಿಣಾಮ ಮಂಡಲ್​ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ನಾಲ್ವರು ಸೇರಿಕೊಂಡು ಹೇಗಾದರೂ ಮಾಡಿ ಶವವನ್ನು ದೂರ ಎಸೆಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಆಕೆಯ ಸಹೋದರ ತನ್ನ ಇಬ್ಬರು ನಿಕಟ ಸಹಚರರನ್ನು ಸಂಪರ್ಕಿಸಿ, ಪಿಕ್ ಅಪ್ ವ್ಯಾನ್ ಬಾಡಿಗೆಗೆ ಪಡೆದು ಶವವನ್ನು ಮಗ್ರಾಹತ್‌ನ ಏಕಾಂತ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಎಸೆದಿದ್ದಾರೆ. ಇತ್ತ, ಗುರುವಾರ ಬೆಳಗ್ಗೆ ಮಂಡಲ್​ ಕುಟುಂಬಸ್ಥರು ನಾಪತ್ತೆ ದೂರು ದಾಖಲಿಸಿದ್ದು, ದೂರಿನ ಬೆನ್ನಟ್ಟಿದಾಗ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಶುಕ್ರವಾರ ರಾತ್ರಿ ಅಯಾನ್ ಮಂಡಲ್​ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್​ ಅಧಿಕಾರಿ ವಿವರಿಸಿದ್ದಾರೆ.

ಇದೇ ವೇಳೆ, ಪ್ರಕರಣವು ಪ್ರಮುಖವಾದ ತಿರುವು ಬಂದಿದೆ. ಅಯಾನ್ ಮನೆಗೆ ಬಂದಿದ್ದ ಗೆಳತಿಯು ತಾನು ಗರ್ಭಿಣಿ ಹಾಗೂ ತನ್ನ ಹೊಟ್ಟೆಯಲ್ಲಿ ಮಗುವಿದೆ ಅಂತಾ ಹೇಳಿಕೊಂಡಿರುವುದಾಗಿ ಅಯಾನ್​ನ ತಾಯಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲು ಮುಂದಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago