ಬೆಳ್ತಂಗಡಿಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ, ಸಮುದಾಯಗಳ ನಡುವೆ ಅಸಮಾಧಾನ ಹುಟ್ಟಿಸುವಂತಹ ಸಂದೇಶವನ್ನು ಫೇಸ್‌ಬುಕ್‌ನಲ್ಲಿ ಹಂಚಿದ ಆರೋಪದ ಮೇಲೆ, ವಸಂತ ಗಿಳಿಯಾರ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಶೇಖರ ಲಾಯಿಲ ಎಂಬ ವ್ಯಕ್ತಿ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಸಿದ್ದರು. ತಮ್ಮ ದೂರುದಲ್ಲಿ ಅವರು, ವಸಂತ ಗಿಳಿಯಾರ್ ಫೇಸ್‌ಬುಕ್‌ನಲ್ಲಿ ಹಾಕಿರುವ ಸಂದೇಶವು ಧಾರ್ಮಿಕ ಸಮುದಾಯಗಳ ನಡುವೆ ದ್ವೇಷದ ವಾತಾವರಣ ಸೃಷ್ಟಿಸುವಂತದ್ದು. ಇಂತಹ ಪೋಸ್ಟ್‌ಗಳು ಸಾಮಾಜಿಕ ಸಮಾಧಾನಕ್ಕೆ ಧಕ್ಕೆಯುಂಟುಮಾಡುವ ಸಾಧ್ಯತೆ ಇರುವುದರಿಂದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು.

ದೂರು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು, ಪ್ರಾಥಮಿಕ ತನಿಖೆ ನಡೆಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 196(1)(ಎ) ಮತ್ತು 353(2) ಬಿಎನ್‌ಎಸ್ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ಸಂಬಂಧ ತನಿಖೆ ಮುಂದುವರೆದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಅಪಾಯಕಾರಿ ಮತ್ತು ಭಿನ್ನಾಭಿಪ್ರಾಯ ಹುಟ್ಟಿಸುವಂತ ವಿಷಯ ಹಂಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

Related News

error: Content is protected !!