ಬೆಳ್ತಂಗಡಿಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ, ಸಮುದಾಯಗಳ ನಡುವೆ ಅಸಮಾಧಾನ ಹುಟ್ಟಿಸುವಂತಹ ಸಂದೇಶವನ್ನು ಫೇಸ್ಬುಕ್ನಲ್ಲಿ ಹಂಚಿದ ಆರೋಪದ ಮೇಲೆ, ವಸಂತ ಗಿಳಿಯಾರ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಶೇಖರ ಲಾಯಿಲ ಎಂಬ ವ್ಯಕ್ತಿ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಸಿದ್ದರು. ತಮ್ಮ ದೂರುದಲ್ಲಿ ಅವರು, ವಸಂತ ಗಿಳಿಯಾರ್ ಫೇಸ್ಬುಕ್ನಲ್ಲಿ ಹಾಕಿರುವ ಸಂದೇಶವು ಧಾರ್ಮಿಕ ಸಮುದಾಯಗಳ ನಡುವೆ ದ್ವೇಷದ ವಾತಾವರಣ ಸೃಷ್ಟಿಸುವಂತದ್ದು. ಇಂತಹ ಪೋಸ್ಟ್ಗಳು ಸಾಮಾಜಿಕ ಸಮಾಧಾನಕ್ಕೆ ಧಕ್ಕೆಯುಂಟುಮಾಡುವ ಸಾಧ್ಯತೆ ಇರುವುದರಿಂದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು.
ದೂರು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು, ಪ್ರಾಥಮಿಕ ತನಿಖೆ ನಡೆಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 196(1)(ಎ) ಮತ್ತು 353(2) ಬಿಎನ್ಎಸ್ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದ ಸಂಬಂಧ ತನಿಖೆ ಮುಂದುವರೆದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಅಪಾಯಕಾರಿ ಮತ್ತು ಭಿನ್ನಾಭಿಪ್ರಾಯ ಹುಟ್ಟಿಸುವಂತ ವಿಷಯ ಹಂಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…