Latest

ನೆಲಮಂಗಲದಲ್ಲಿ ರೇಣುಕಾಸ್ವಾಮಿ ಕೇಸ್ ಶೈಲಿಯ ಹಲ್ಲೆ: ಯುವಕನ ಮೇಲೆ ಮಾರಣಾಂತಿಕ ದಾಳಿ, ಆರೋಪಿಗಳು ನಾಲ್ವರು ಬಂಧನ

ನೆಲಮಂಗಲ (ಜುಲೈ 7): ರಾಜ್ಯದಾದ್ಯಂತ ಸಾಕಷ್ಟು ಚರ್ಚೆ ಗೊಂಡಿದ್ದ ನಟ ದರ್ಶನ್ ಸಂಬಂಧಿತ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನೆರಳೇ ಇನ್ನೊಂದು ಹೃದಯ ವಿದ್ರಾವಕ ಘಟನೆ ಇದೀಗ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ಈ ಬಾರಿ ಕೂಡಾ ಘಟನೆ ದರ್ಶನ್ ಕೇಸ್ ಗೆ ಹೋಲಿಕೆ ಮಾಡಬಹುದಾದ ರೀತಿಯಲ್ಲಿ ನಡೆದಿದೆ. ಘಟನೆಯು ಅಷ್ಟರಲ್ಲೇ ಅಸಹ್ಯತೆಯ ಗಡಿಗಳನ್ನು ದಾಟಿದೆ.

ವೈಯಕ್ತಿಕ ವೈಮನಸ್ಯಕ್ಕೆ ಯುವಕನ ಮೇಲೆ ಪಶುಸ್ವರೂಪಿ ಹಲ್ಲೆ

ಕುಶಾಲ್ ಎಂಬ ಯುವಕನ ಮೇಲೆ 8 ರಿಂದ 10 ಮಂದಿ ಯುವಕರ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಘಟನೆ ಹಿಂದೆ ಹುಡುಗಿ ವಿಚಾರ ಕಾರಣವಾಗಿದೆ. ಕುಶಾಲ್ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಒಬ್ಬ ಯುವತಿಯೊಂದಿಗೆ ಪ್ರೀತಿ ಸಂಬಂಧ ಹೊಂದಿದ್ದ. ಆದರೆ ಕೆಲ ತಿಂಗಳ ಹಿಂದೆ ಸಂಬಂಧ ಮುರಿದು ಬಿದ್ದಿತು. ಬಳಿಕ ಯುವತಿಗೆ ಮತ್ತೊಬ್ಬ ಯುವಕನ ಪರಿಚಯವಾಗಿತ್ತು. ಈ ಸಂಬಂಧವನ್ನು ಸಹಿಸದ ಕುಶಾಲ್, ಆಕೆಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ.

ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಯುವತಿ ತನ್ನ ಗೆಳೆಯರು ಹಾಗೂ ಸ್ನೇಹಿತರೊಂದಿಗೆ ಸೇರಿ ಕುಶಾಲ್ ವಿರುದ್ಧ ಹಲ್ಲೆ ಯೋಜನೆ ಹಾಕಿದ್ದರು. “ಮಾತಾಡೋಣ” ಎಂಬ ನೆಪದಲ್ಲಿ ಕರೆಸಿ, ಕಾರಿನಲ್ಲಿ ಕುಶಾಲನ್ನು ಕಿಡ್ನಾಪ್ ಮಾಡಿ, ದೂರದ ಕಾಡು ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿಯೇ ಅವನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ನಿರ್ದಯ ಹಲ್ಲೆ ನಡೆಸಲಾಗಿದೆ.

ದರ್ಶನ್ ಕೇಸ್ ಉಲ್ಲೇಖಿಸಿ ಹಲ್ಲೆ: ವಿಡಿಯೋ ಮಾಡಿ ಬೆದರಿಕೆ

ಹಲ್ಲೆ ಸಮಯದಲ್ಲಿ ದುಷ್ಕರ್ಮಿಗಳು ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ, “ಇದು ಕೂಡ ಆ ಕೇಸ್‌ಗೂ ಹೋಲಿಕೆಯಾಗುತ್ತದೆ” ಎಂದು ಹೇಳಿರುವುದು ಧೃಡವಾಗಿದ್ದು, ‘ಎ1 ಹೇಮಂತ್, ಎ2 ನಾನು’ ಎಂಬ ರೀತಿಯಲ್ಲಿ ವಿಡಿಯೋ ಮಾಡಿದ್ದಾರೆ. ಹಲ್ಲೆಯ ಚಿತ್ರಣವನ್ನು ಮೊಬೈಲ್‌ನಲ್ಲಿ ಧ್ವನಿಮುದ್ರಣ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವ ಬೆದರಿಕೆಯನ್ನು ನೀಡಲಾಗಿದೆ. ಮರ್ಮಾಂಗದ ಮೇಲೆ ದಾಳಿ ಮಾಡಿ ಯುವಕನನ್ನು ಮಾನಸಿಕ ಹಾಗೂ ಶಾರೀರಿಕವಾಗಿ ದ್ವಂಸಗೊಳಿಸಲಾಗಿದೆ.

ಆರೋಪಿಗಳು ಬಂಧನ: ಪೋಲಿಸ್ ತನಿಖೆ ಆರಂಭ

ಘಟನೆ ಸಂಬಂಧವಾಗಿ ನೆಲಮಂಗಲದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್ ಹಾಗೂ ಶಶಾಂಕ್ ಗೌಡ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕೆಲ ಆರೋಪಿಗಳು ಪಲಾಯನದಲ್ಲಿರುವ ಶಂಕೆ ಇದೆ. ಪೊಲೀಸರು ತನಿಖೆಯನ್ನು ಗಂಭೀರವಾಗಿ ಮುಂದುವರೆಸಿದ್ದು, ಘಟನೆಯ ಹಿಂದಿನ ನಿಖರ ಕಾರಣವನ್ನು ತಿಳಿದುಕೊಳ್ಳಲು ಮುಂದಾಗಿದ್ದಾರೆ.

nazeer ahamad

Recent Posts

ಜಾಗತಿಕ ಬ್ಯಾಂಕಿಂಗ್ ದಿಗ್ಗಜ JPMorganನಲ್ಲಿ ಲೈಂಗಿಕ ಕಿರುಕುಳ ಆರೋಪ: ಭಾರತೀಯ ಉದ್ಯೋಗಿಗೆ ಸೆಕ್ಸ್ ಮಾಡುವುದಕ್ಕೆ ನಿರ್ದೇಶಕಿಯಿಂದ ಒತ್ತಾಯ

ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…

14 hours ago

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…

15 hours ago

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

2 days ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

2 days ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

2 days ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

2 days ago