Latest

ನೆಲಮಂಗಲದಲ್ಲಿ ರೇಣುಕಾಸ್ವಾಮಿ ಕೇಸ್ ಶೈಲಿಯ ಹಲ್ಲೆ: ಯುವಕನ ಮೇಲೆ ಮಾರಣಾಂತಿಕ ದಾಳಿ, ಆರೋಪಿಗಳು ನಾಲ್ವರು ಬಂಧನ

ನೆಲಮಂಗಲ (ಜುಲೈ 7): ರಾಜ್ಯದಾದ್ಯಂತ ಸಾಕಷ್ಟು ಚರ್ಚೆ ಗೊಂಡಿದ್ದ ನಟ ದರ್ಶನ್ ಸಂಬಂಧಿತ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನೆರಳೇ ಇನ್ನೊಂದು ಹೃದಯ ವಿದ್ರಾವಕ ಘಟನೆ ಇದೀಗ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ಈ ಬಾರಿ ಕೂಡಾ ಘಟನೆ ದರ್ಶನ್ ಕೇಸ್ ಗೆ ಹೋಲಿಕೆ ಮಾಡಬಹುದಾದ ರೀತಿಯಲ್ಲಿ ನಡೆದಿದೆ. ಘಟನೆಯು ಅಷ್ಟರಲ್ಲೇ ಅಸಹ್ಯತೆಯ ಗಡಿಗಳನ್ನು ದಾಟಿದೆ.

ವೈಯಕ್ತಿಕ ವೈಮನಸ್ಯಕ್ಕೆ ಯುವಕನ ಮೇಲೆ ಪಶುಸ್ವರೂಪಿ ಹಲ್ಲೆ

ಕುಶಾಲ್ ಎಂಬ ಯುವಕನ ಮೇಲೆ 8 ರಿಂದ 10 ಮಂದಿ ಯುವಕರ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಘಟನೆ ಹಿಂದೆ ಹುಡುಗಿ ವಿಚಾರ ಕಾರಣವಾಗಿದೆ. ಕುಶಾಲ್ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಒಬ್ಬ ಯುವತಿಯೊಂದಿಗೆ ಪ್ರೀತಿ ಸಂಬಂಧ ಹೊಂದಿದ್ದ. ಆದರೆ ಕೆಲ ತಿಂಗಳ ಹಿಂದೆ ಸಂಬಂಧ ಮುರಿದು ಬಿದ್ದಿತು. ಬಳಿಕ ಯುವತಿಗೆ ಮತ್ತೊಬ್ಬ ಯುವಕನ ಪರಿಚಯವಾಗಿತ್ತು. ಈ ಸಂಬಂಧವನ್ನು ಸಹಿಸದ ಕುಶಾಲ್, ಆಕೆಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ.

ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಯುವತಿ ತನ್ನ ಗೆಳೆಯರು ಹಾಗೂ ಸ್ನೇಹಿತರೊಂದಿಗೆ ಸೇರಿ ಕುಶಾಲ್ ವಿರುದ್ಧ ಹಲ್ಲೆ ಯೋಜನೆ ಹಾಕಿದ್ದರು. “ಮಾತಾಡೋಣ” ಎಂಬ ನೆಪದಲ್ಲಿ ಕರೆಸಿ, ಕಾರಿನಲ್ಲಿ ಕುಶಾಲನ್ನು ಕಿಡ್ನಾಪ್ ಮಾಡಿ, ದೂರದ ಕಾಡು ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿಯೇ ಅವನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ನಿರ್ದಯ ಹಲ್ಲೆ ನಡೆಸಲಾಗಿದೆ.

ದರ್ಶನ್ ಕೇಸ್ ಉಲ್ಲೇಖಿಸಿ ಹಲ್ಲೆ: ವಿಡಿಯೋ ಮಾಡಿ ಬೆದರಿಕೆ

ಹಲ್ಲೆ ಸಮಯದಲ್ಲಿ ದುಷ್ಕರ್ಮಿಗಳು ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ, “ಇದು ಕೂಡ ಆ ಕೇಸ್‌ಗೂ ಹೋಲಿಕೆಯಾಗುತ್ತದೆ” ಎಂದು ಹೇಳಿರುವುದು ಧೃಡವಾಗಿದ್ದು, ‘ಎ1 ಹೇಮಂತ್, ಎ2 ನಾನು’ ಎಂಬ ರೀತಿಯಲ್ಲಿ ವಿಡಿಯೋ ಮಾಡಿದ್ದಾರೆ. ಹಲ್ಲೆಯ ಚಿತ್ರಣವನ್ನು ಮೊಬೈಲ್‌ನಲ್ಲಿ ಧ್ವನಿಮುದ್ರಣ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವ ಬೆದರಿಕೆಯನ್ನು ನೀಡಲಾಗಿದೆ. ಮರ್ಮಾಂಗದ ಮೇಲೆ ದಾಳಿ ಮಾಡಿ ಯುವಕನನ್ನು ಮಾನಸಿಕ ಹಾಗೂ ಶಾರೀರಿಕವಾಗಿ ದ್ವಂಸಗೊಳಿಸಲಾಗಿದೆ.

ಆರೋಪಿಗಳು ಬಂಧನ: ಪೋಲಿಸ್ ತನಿಖೆ ಆರಂಭ

ಘಟನೆ ಸಂಬಂಧವಾಗಿ ನೆಲಮಂಗಲದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್ ಹಾಗೂ ಶಶಾಂಕ್ ಗೌಡ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕೆಲ ಆರೋಪಿಗಳು ಪಲಾಯನದಲ್ಲಿರುವ ಶಂಕೆ ಇದೆ. ಪೊಲೀಸರು ತನಿಖೆಯನ್ನು ಗಂಭೀರವಾಗಿ ಮುಂದುವರೆಸಿದ್ದು, ಘಟನೆಯ ಹಿಂದಿನ ನಿಖರ ಕಾರಣವನ್ನು ತಿಳಿದುಕೊಳ್ಳಲು ಮುಂದಾಗಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago