Categories: Latest

ರೇಣುಕಾಸ್ವಾಮಿ ಹತ್ಯೆ: ಕಣ್ಣೀರಲ್ಲಿ ಮುಳುಗಿದ ಕುಟುಂಬ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಿಂದಾಗಿ ಅವರ ಕುಟುಂಬ ದಿಕ್ಕೆಟ್ಟು ಹೋಗಿದೆ. ದರ್ಶನ್ ಹಾಗೂ ಗ್ಯಾಂಗ್‌ನಿಂದ ನರಹತ್ಯೆಗೆ ಒಳಗಾದ ಯುವಕನ ಸಾವಿನ ಸುದ್ದಿ ಪತ್ನಿ, ತಾಯಿ, ತಂದೆಗೆ ತಲುಪಿದಾಗ ಉಂಟಾದ ಆಘಾತ ಅಳತೆಗಟ್ಟದಂತಿತ್ತು.

ಹಿಂಸಾಚಾರದ ತೀವ್ರತೆಯಿಂದ ಶವವನ್ನು ಗುರುತಿಸುವುದೇ ಕಷ್ಟವಾಗಿತ್ತು. ‘ಅವನನ್ನು ಬದುಕಿದ್ದರೂ, ಕೈಕಾಲು ಕುಂಟಾದರೂ ತರುವಿರಿ. ನಾನು ನೋಡಿಕೊಳ್ಳುತ್ತೇನೆ’ ಎಂದು ಕಣ್ಣೀರು ಹಾಕಿದ್ದ ಪತ್ನಿ ಸಹನಾ, ಆಗ ಐದು ತಿಂಗಳ ಗರ್ಭಿಣಿಯಾಗಿದ್ದರು. ಆದರೆ ಆಕೆಗೆ ಆಘಾತಕರ ಸತ್ಯವನ್ನು ಮೊದಲೇ ತಿಳಿಸಲಾಗಿರಲಿಲ್ಲ. ಕೇವಲ ಜಗಳವಾಗಿದೆ ಎಂದು ಹೇಳಿ ವಿಷಯವನ್ನು ಕುಟುಂಬ ಮುಚ್ಚಿಟ್ಟಿತ್ತು.

“ಮಗನನ್ನು ಬದುಕಾಗಿ ತರುವೆವೆಂದಿದ್ದೆವು, ಆದರೆ ಹೆಣವಾಗಿ ತರುವಂತಾಯಿತು”

ಆ ದಿನದ ನೋವನ್ನು ನೆನಪಿಸಿಕೊಂಡ ರೇಣುಕಾಸ್ವಾಮಿಯ ತಂದೆ-ತಾಯಿ ಹೇಳುವುದೇ ಹೃದಯ ಬಡಿದಿಡುವಂತಿದೆ.
“ಸೊಸೆಗೆ ನಾವು ಅವನನ್ನು ಕರೆದುಕೊಂಡು ಬರುತ್ತೇವೆ ಎಂದಿದ್ದೆವು. ಆದರೆ ಹೆಣವಾಗಿ ತರುತ್ತೇವೆ ಎನ್ನುವಂತಿರಲಿಲ್ಲ. ನಂತರ ಪೊಲೀಸರ ಮೂಲಕ ಸತ್ಯ ಗೊತ್ತಾಯಿತು. ಆಸ್ಪತ್ರೆಗೆ ಕರೆದೊಯ್ದು ಶವದ ಮೇಲೆ ಸಹಿ ಮಾಡಿಸಿಕೊಂಡರು. ಮೊದಲಿಗೆ ಗುರುತು ಹಿಡಿಯಲು ಆಗಲಿಲ್ಲ. ಬಾಯಿ, ತುಟಿಯನ್ನು ನಾಯಿಗಳು ಕಚ್ಚಿದ್ದವು. ಮುಖ, ದೇಹದ ತುಂಬಾ ಗುರುತು ಮಾಡಿದ್ದರು. ದೇಹವೇ ಊದಿಕೊಂಡಿತ್ತು. ಕೊನೆಗೆ ಧರಿಸಿದ್ದ ಬಟ್ಟೆ ನೋಡಿ ಅವನೇ ನಮ್ಮ ಮಗನೆಂದು ತಿಳಿಯಬೇಕಾಯಿತು” ಎಂದು ಕಣ್ಣೀರು ಹಾಕಿದ್ದಾರೆ.

“ತಪ್ಪು ಮಾಡಿದ್ರೆ ಶಿಕ್ಷೆ ಕೊಡಬಹುದಿತ್ತು, ಪ್ರಾಣ ಕಸಿಯಬೇಕಿತ್ತಾ?”

ಮಗನ ತಪ್ಪನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದು ಹೇಳಿದ ತಂದೆ ಕಾಶಿನಾಥಯ್ಯ, ದರ್ಶನ್ ಮತ್ತು ಪವಿತ್ರಾ ಗೌಡನ ಕ್ರೌರ್ಯವನ್ನು ಪ್ರಶ್ನಿಸಿದ್ದಾರೆ.
“ಅವನ ತಪ್ಪಿಗೆ ತಕ್ಕ ಶಿಕ್ಷೆ ಕೊಡಬಹುದಿತ್ತು. ಪವಿತ್ರಾ ಬ್ಲಾಕ್ ಮಾಡಬಹುದಿತ್ತು, ಪೊಲೀಸರಿಗೆ ಮಾಹಿತಿ ಕೊಡಬಹುದಿತ್ತು. ಆದರೆ ಅಷ್ಟು ಕ್ರೂರವಾಗಿ ಕೊಲ್ಲಬೇಕಿತ್ತಾ? 8-10 ಜನರು ಸೇರಿಕೊಂಡು ಮಗನನ್ನು ಕೊಲ್ಲಲು ಏನು ಅಗತ್ಯವಿತ್ತು?” ಎಂದು ಕಣ್ಣೀರಲ್ಲಿ ಮುಳುಗಿದ್ದಾರೆ.

ಇತ್ತೀಚೆಗೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಜಾಮೀನು ರದ್ದುಗೊಂಡಿದ್ದು, ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಆದರೆ ರೇಣುಕಾಸ್ವಾಮಿ ಕುಟುಂಬಕ್ಕೆ ಈ ನಿರ್ಧಾರ ತಾತ್ಕಾಲಿಕ ನೆಮ್ಮದಿಯನ್ನು ನೀಡಿದರೂ, ಕಳೆದುಕೊಂಡ ಮಗನ ನೋವು ಶಾಶ್ವತವಾಗಿ ಉಳಿದಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

4 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago