Categories: Latest

ರೇಣುಕಾಸ್ವಾಮಿ ಹತ್ಯೆ: ಕಣ್ಣೀರಲ್ಲಿ ಮುಳುಗಿದ ಕುಟುಂಬ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಿಂದಾಗಿ ಅವರ ಕುಟುಂಬ ದಿಕ್ಕೆಟ್ಟು ಹೋಗಿದೆ. ದರ್ಶನ್ ಹಾಗೂ ಗ್ಯಾಂಗ್‌ನಿಂದ ನರಹತ್ಯೆಗೆ ಒಳಗಾದ ಯುವಕನ ಸಾವಿನ ಸುದ್ದಿ ಪತ್ನಿ, ತಾಯಿ, ತಂದೆಗೆ ತಲುಪಿದಾಗ ಉಂಟಾದ ಆಘಾತ ಅಳತೆಗಟ್ಟದಂತಿತ್ತು.

ಹಿಂಸಾಚಾರದ ತೀವ್ರತೆಯಿಂದ ಶವವನ್ನು ಗುರುತಿಸುವುದೇ ಕಷ್ಟವಾಗಿತ್ತು. ‘ಅವನನ್ನು ಬದುಕಿದ್ದರೂ, ಕೈಕಾಲು ಕುಂಟಾದರೂ ತರುವಿರಿ. ನಾನು ನೋಡಿಕೊಳ್ಳುತ್ತೇನೆ’ ಎಂದು ಕಣ್ಣೀರು ಹಾಕಿದ್ದ ಪತ್ನಿ ಸಹನಾ, ಆಗ ಐದು ತಿಂಗಳ ಗರ್ಭಿಣಿಯಾಗಿದ್ದರು. ಆದರೆ ಆಕೆಗೆ ಆಘಾತಕರ ಸತ್ಯವನ್ನು ಮೊದಲೇ ತಿಳಿಸಲಾಗಿರಲಿಲ್ಲ. ಕೇವಲ ಜಗಳವಾಗಿದೆ ಎಂದು ಹೇಳಿ ವಿಷಯವನ್ನು ಕುಟುಂಬ ಮುಚ್ಚಿಟ್ಟಿತ್ತು.

“ಮಗನನ್ನು ಬದುಕಾಗಿ ತರುವೆವೆಂದಿದ್ದೆವು, ಆದರೆ ಹೆಣವಾಗಿ ತರುವಂತಾಯಿತು”

ಆ ದಿನದ ನೋವನ್ನು ನೆನಪಿಸಿಕೊಂಡ ರೇಣುಕಾಸ್ವಾಮಿಯ ತಂದೆ-ತಾಯಿ ಹೇಳುವುದೇ ಹೃದಯ ಬಡಿದಿಡುವಂತಿದೆ.
“ಸೊಸೆಗೆ ನಾವು ಅವನನ್ನು ಕರೆದುಕೊಂಡು ಬರುತ್ತೇವೆ ಎಂದಿದ್ದೆವು. ಆದರೆ ಹೆಣವಾಗಿ ತರುತ್ತೇವೆ ಎನ್ನುವಂತಿರಲಿಲ್ಲ. ನಂತರ ಪೊಲೀಸರ ಮೂಲಕ ಸತ್ಯ ಗೊತ್ತಾಯಿತು. ಆಸ್ಪತ್ರೆಗೆ ಕರೆದೊಯ್ದು ಶವದ ಮೇಲೆ ಸಹಿ ಮಾಡಿಸಿಕೊಂಡರು. ಮೊದಲಿಗೆ ಗುರುತು ಹಿಡಿಯಲು ಆಗಲಿಲ್ಲ. ಬಾಯಿ, ತುಟಿಯನ್ನು ನಾಯಿಗಳು ಕಚ್ಚಿದ್ದವು. ಮುಖ, ದೇಹದ ತುಂಬಾ ಗುರುತು ಮಾಡಿದ್ದರು. ದೇಹವೇ ಊದಿಕೊಂಡಿತ್ತು. ಕೊನೆಗೆ ಧರಿಸಿದ್ದ ಬಟ್ಟೆ ನೋಡಿ ಅವನೇ ನಮ್ಮ ಮಗನೆಂದು ತಿಳಿಯಬೇಕಾಯಿತು” ಎಂದು ಕಣ್ಣೀರು ಹಾಕಿದ್ದಾರೆ.

“ತಪ್ಪು ಮಾಡಿದ್ರೆ ಶಿಕ್ಷೆ ಕೊಡಬಹುದಿತ್ತು, ಪ್ರಾಣ ಕಸಿಯಬೇಕಿತ್ತಾ?”

ಮಗನ ತಪ್ಪನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದು ಹೇಳಿದ ತಂದೆ ಕಾಶಿನಾಥಯ್ಯ, ದರ್ಶನ್ ಮತ್ತು ಪವಿತ್ರಾ ಗೌಡನ ಕ್ರೌರ್ಯವನ್ನು ಪ್ರಶ್ನಿಸಿದ್ದಾರೆ.
“ಅವನ ತಪ್ಪಿಗೆ ತಕ್ಕ ಶಿಕ್ಷೆ ಕೊಡಬಹುದಿತ್ತು. ಪವಿತ್ರಾ ಬ್ಲಾಕ್ ಮಾಡಬಹುದಿತ್ತು, ಪೊಲೀಸರಿಗೆ ಮಾಹಿತಿ ಕೊಡಬಹುದಿತ್ತು. ಆದರೆ ಅಷ್ಟು ಕ್ರೂರವಾಗಿ ಕೊಲ್ಲಬೇಕಿತ್ತಾ? 8-10 ಜನರು ಸೇರಿಕೊಂಡು ಮಗನನ್ನು ಕೊಲ್ಲಲು ಏನು ಅಗತ್ಯವಿತ್ತು?” ಎಂದು ಕಣ್ಣೀರಲ್ಲಿ ಮುಳುಗಿದ್ದಾರೆ.

ಇತ್ತೀಚೆಗೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಜಾಮೀನು ರದ್ದುಗೊಂಡಿದ್ದು, ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಆದರೆ ರೇಣುಕಾಸ್ವಾಮಿ ಕುಟುಂಬಕ್ಕೆ ಈ ನಿರ್ಧಾರ ತಾತ್ಕಾಲಿಕ ನೆಮ್ಮದಿಯನ್ನು ನೀಡಿದರೂ, ಕಳೆದುಕೊಂಡ ಮಗನ ನೋವು ಶಾಶ್ವತವಾಗಿ ಉಳಿದಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago