ಚಿಕ್ಕಮಗಳೂರು, ಜೂನ್ 29: ಕೊಪ್ಪ ಪಟ್ಟಣದ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗಿಸುತ್ತಿದ್ದ 13 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ದುಃಖದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಈ ದಾರುಣ ಘಟನೆ ನಡೆದಿದ್ದು, ಬೆಳಗ್ಗೆ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೊಪ್ಪ ತಾಲ್ಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶನಿವಾರ ದಿನವಿಡೀ ಶಮಿತಾ ಸಹಪಾಠಿಗಳೊಂದಿಗೆ ಸಾಮಾನ್ಯವಾಗಿ ನಡೆದುಕೊಂಡು ಶನಿವಾರ ರಾತ್ರಿ ತನ್ನ ಕೊಠಡಿಯಲ್ಲಿ ಇತರ ವಿದ್ಯಾರ್ಥಿನಿಯರು ನಿದ್ರೆ ಮಾಡುತ್ತಿರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ಮಾಹಿತಿ ಲಭ್ಯವಾದ ತಕ್ಷಣ ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಾಲೆಯಲ್ಲಿ ಅಥವಾ ವೈಯಕ್ತಿಕ ಜೀವನದಲ್ಲಿ ಯಾವುದೇ ತೊಂದರೆ ಇದ್ದದೆಯೇ ಎಂಬ ವಿಷಯದ ಕುರಿತು ಪೊಲೀಸರು ಹಲವು ಅಂಶಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ದುರ್ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭೀತಿಯ ಪರಿಸರ ಉಂಟಾಗಿದೆ.
ಬೆಂಗಳೂರು: ಕರ್ತವ್ಯ ನಿರ್ವಹಣೆಯ ನಡುವೆ ಗಂಭೀರ ಅಪಘಾತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಪಿಎಸ್ಐ ಒಬ್ಬರು ಮೃತಪಟ್ಟ ದುಃಖಾಂತ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.…
ಬೆಳಗಾವಿ: ಗ್ರಾಮ ಪಂಚಾಯತಿ ಸದಸ್ಯನೊಬ್ಬ ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಗೂಂಡಾ ಶೈಲಿಯಲ್ಲಿ ವರ್ತಿಸಿ, ಬಂದೂಕಿನಿಂದ ಗಾಳಿಗೆ ಗುಂಡು ಹಾರಿಸಿದ್ದಾನೆ. ಈ ಅಸಾಧಾರಣ…
ಮಂಗಳೂರು, ಜೂನ್ 29: ಉಳ್ಳಾಲದ ಸೋಮೇಶ್ವರ ಬೀಚ್ ಪ್ರದೇಶದಲ್ಲಿ ನರ್ಸಿಂಗ್ ಶಿಕ್ಷಣಕ್ಕೆ ತಯಾರಿ ನಡೆಸುತ್ತಿದ್ದ ಬಾಲಕಿ ಅತ್ಯಾಚಾರ ದೌರ್ಜನ್ಯ ಎಸಗಿರುವ…
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಐ ಶ್ಕಾಂತರಾಜ್.ಕೆ ರವರು ಇದೇ ತಿಂಗಳ ಜೂನ್ 26 ರಂದು ಸಂಜೆ ಸಮಯ ಠಾಣೆಯಲ್ಲಿದ್ದಾಗ…
ಹೊನ್ನಾವರ: ಮಹಿಳೆಯರ ಗೌರವ ಮತ್ತು ಗೌಪ್ಯತೆ ಕಡೆಗಣಿಸುವ ಆತ್ಮಹೀನ ಕೃತ್ಯವೊಂದು ಹೊನ್ನಾವರದಲ್ಲಿ ಬೆಳಕಿಗೆ ಬಂದಿದೆ. ಸ್ನಾನ ಮಾಡುವ ಮಹಿಳೆಯನ್ನೇ ಇಣುಕಿ…
ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು…