ಧಾರವಾಡ ಜಿಲ್ಲೆಯ ನವಲಗುಂದ ವ್ಯಾಪ್ತಿಯ ಬಸವೇಶ್ವರನಗರದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯ ಉಪಯೋಗಕ್ಕೆ ತರಿಸಿಕೊಂಡಿದ್ದ ಮಣ್ಣು ರಸ್ತೆಯ ಪಕ್ಕದ ಚರಂಡಿಯಲ್ಲಿ ಬಿದ್ದು ಸ್ಥಳೀಯರ ನಿದ್ದೆ ಕೆಡಿಸುವಂತಾಗಿದೆ ಇದನ್ನು ಸ್ಥಳೀಯ ಗುತ್ತಿಗೆದಾರರು ಹಾಗೂ ನವಲಗುಂದ ಪುರಸಭೆ ಅಧಿಕಾರಿಗಳು ಕಂಡರೂ ಕಾಣದಂತೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ . ಕಳೆದ 8-10 ದಿನಗಳಿಂದ ಬಸವೇಶ್ವರ ನಗರದಲ್ಲಿ ಭರದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇತ್ತೀಚೆಗೆ ಯಾಕೋ ವಿಳಂಬವಾಗಿಬಿಟ್ಟಿದೆ ಮತ್ತು ಈ ಕಾಮಗಾರಿಗೆ ತರಿಸಿಕೊಂದಿದ್ದ ಗರಸು ಮಣ್ಣು ರಸ್ತೆ ಪಕ್ಕದಲ್ಲಿ ಚರಂಡಿಯಲ್ಲಿ ಬಿದ್ದಿದ್ದು ಸ್ಥಳೀಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ಚರಂಡಿಯಲ್ಲಿ ಬಿದ್ದಿರುವ ಮಣ್ಣನ್ನು ತೆಗೆಯಿರಿ ಕ್ರಿಮಿ ಕೀಟಗಳು ಉತ್ಪತ್ತಿಯಾಗಿ ಸಮಸ್ಯೆ ಆಗುತ್ತದೆ ಎಂದೂ ಕೇಳಿಕೊಂಡರು ಅಧಿಕಾರಿಗಳ ಇತ್ತ ಗಮನ ಹರಿಸುತ್ತಿಲ್ಲ. ಇನ್ನೂ ಮಣ್ಣು ಬಿದ್ದಿರುವ ಈ ಚರಂಡಿಯಲ್ಲಿ ಚರಂಡಿಯ ಮೂಲಕ ಹರಿದುಕೊಂಡು ಬಂದ ಕೊಳಕು ನೀರು ಒಂದೇ ಕಡೆ ಸಂಗ್ರಹವಾಗಿ ಬೆಳಿಗ್ಗೆ ಸಮಯದಲ್ಲಿ ನೊಣಗಳ ಕಾಟ ರಾತ್ರಿ ಸಮಯದಲ್ಲಿ ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಈ ಕಾಟದಿಂದ ಸ್ಥಳೀಯ ನಿವಾಸಿಗಳು ಬೇಸತ್ತು ಹಿಡಿ ಶಾಪ ಹಾಕುವಂತಾಗಿದೆ ಅಷ್ಟೇ ಅಲ್ಲದೇ ತಕ್ಷಣ ಈ ವಿಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಮಣ್ಣು ತಗೆದು ಸ್ಥಳೀಯರಿಗೆ ಸರಿಯಾದ ರಸ್ತೆ ನಿರ್ಮಿಸಿಕೊಡಬೇಕು ಇಲ್ಲವಾದರೆ ಈ ಕಾಮಗಾರಿಯನ್ನೇ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ : ಶಿವು
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…