ಧಾರವಾಡ ಜಿಲ್ಲೆಯ ನವಲಗುಂದ ವ್ಯಾಪ್ತಿಯ ಬಸವೇಶ್ವರನಗರದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯ ಉಪಯೋಗಕ್ಕೆ ತರಿಸಿಕೊಂಡಿದ್ದ ಮಣ್ಣು ರಸ್ತೆಯ ಪಕ್ಕದ ಚರಂಡಿಯಲ್ಲಿ ಬಿದ್ದು ಸ್ಥಳೀಯರ ನಿದ್ದೆ ಕೆಡಿಸುವಂತಾಗಿದೆ ಇದನ್ನು ಸ್ಥಳೀಯ ಗುತ್ತಿಗೆದಾರರು ಹಾಗೂ ನವಲಗುಂದ ಪುರಸಭೆ ಅಧಿಕಾರಿಗಳು ಕಂಡರೂ ಕಾಣದಂತೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ . ಕಳೆದ 8-10 ದಿನಗಳಿಂದ ಬಸವೇಶ್ವರ ನಗರದಲ್ಲಿ ಭರದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇತ್ತೀಚೆಗೆ ಯಾಕೋ ವಿಳಂಬವಾಗಿಬಿಟ್ಟಿದೆ ಮತ್ತು ಈ ಕಾಮಗಾರಿಗೆ ತರಿಸಿಕೊಂದಿದ್ದ ಗರಸು ಮಣ್ಣು ರಸ್ತೆ ಪಕ್ಕದಲ್ಲಿ ಚರಂಡಿಯಲ್ಲಿ ಬಿದ್ದಿದ್ದು ಸ್ಥಳೀಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ಚರಂಡಿಯಲ್ಲಿ ಬಿದ್ದಿರುವ ಮಣ್ಣನ್ನು ತೆಗೆಯಿರಿ ಕ್ರಿಮಿ ಕೀಟಗಳು ಉತ್ಪತ್ತಿಯಾಗಿ ಸಮಸ್ಯೆ ಆಗುತ್ತದೆ ಎಂದೂ ಕೇಳಿಕೊಂಡರು ಅಧಿಕಾರಿಗಳ ಇತ್ತ ಗಮನ ಹರಿಸುತ್ತಿಲ್ಲ. ಇನ್ನೂ ಮಣ್ಣು ಬಿದ್ದಿರುವ ಈ ಚರಂಡಿಯಲ್ಲಿ ಚರಂಡಿಯ ಮೂಲಕ ಹರಿದುಕೊಂಡು ಬಂದ ಕೊಳಕು ನೀರು ಒಂದೇ ಕಡೆ ಸಂಗ್ರಹವಾಗಿ ಬೆಳಿಗ್ಗೆ ಸಮಯದಲ್ಲಿ ನೊಣಗಳ ಕಾಟ ರಾತ್ರಿ ಸಮಯದಲ್ಲಿ ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಈ ಕಾಟದಿಂದ ಸ್ಥಳೀಯ ನಿವಾಸಿಗಳು ಬೇಸತ್ತು ಹಿಡಿ ಶಾಪ ಹಾಕುವಂತಾಗಿದೆ ಅಷ್ಟೇ ಅಲ್ಲದೇ ತಕ್ಷಣ ಈ ವಿಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಮಣ್ಣು ತಗೆದು ಸ್ಥಳೀಯರಿಗೆ ಸರಿಯಾದ ರಸ್ತೆ ನಿರ್ಮಿಸಿಕೊಡಬೇಕು ಇಲ್ಲವಾದರೆ ಈ ಕಾಮಗಾರಿಯನ್ನೇ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ : ಶಿವು
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…