ಧಾರವಾಡ ಜಿಲ್ಲೆಯ ನವಲಗುಂದ ವ್ಯಾಪ್ತಿಯ ಬಸವೇಶ್ವರನಗರದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯ ಉಪಯೋಗಕ್ಕೆ ತರಿಸಿಕೊಂಡಿದ್ದ ಮಣ್ಣು ರಸ್ತೆಯ ಪಕ್ಕದ ಚರಂಡಿಯಲ್ಲಿ ಬಿದ್ದು ಸ್ಥಳೀಯರ ನಿದ್ದೆ ಕೆಡಿಸುವಂತಾಗಿದೆ ಇದನ್ನು ಸ್ಥಳೀಯ ಗುತ್ತಿಗೆದಾರರು ಹಾಗೂ ನವಲಗುಂದ ಪುರಸಭೆ ಅಧಿಕಾರಿಗಳು ಕಂಡರೂ ಕಾಣದಂತೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ . ಕಳೆದ 8-10 ದಿನಗಳಿಂದ ಬಸವೇಶ್ವರ ನಗರದಲ್ಲಿ ಭರದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇತ್ತೀಚೆಗೆ ಯಾಕೋ ವಿಳಂಬವಾಗಿಬಿಟ್ಟಿದೆ ಮತ್ತು ಈ ಕಾಮಗಾರಿಗೆ ತರಿಸಿಕೊಂದಿದ್ದ ಗರಸು ಮಣ್ಣು ರಸ್ತೆ ಪಕ್ಕದಲ್ಲಿ ಚರಂಡಿಯಲ್ಲಿ ಬಿದ್ದಿದ್ದು ಸ್ಥಳೀಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ಚರಂಡಿಯಲ್ಲಿ ಬಿದ್ದಿರುವ ಮಣ್ಣನ್ನು ತೆಗೆಯಿರಿ ಕ್ರಿಮಿ ಕೀಟಗಳು ಉತ್ಪತ್ತಿಯಾಗಿ ಸಮಸ್ಯೆ ಆಗುತ್ತದೆ ಎಂದೂ ಕೇಳಿಕೊಂಡರು ಅಧಿಕಾರಿಗಳ ಇತ್ತ ಗಮನ ಹರಿಸುತ್ತಿಲ್ಲ. ಇನ್ನೂ ಮಣ್ಣು ಬಿದ್ದಿರುವ ಈ ಚರಂಡಿಯಲ್ಲಿ ಚರಂಡಿಯ ಮೂಲಕ ಹರಿದುಕೊಂಡು ಬಂದ ಕೊಳಕು ನೀರು ಒಂದೇ ಕಡೆ ಸಂಗ್ರಹವಾಗಿ ಬೆಳಿಗ್ಗೆ ಸಮಯದಲ್ಲಿ ನೊಣಗಳ ಕಾಟ ರಾತ್ರಿ ಸಮಯದಲ್ಲಿ ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಈ ಕಾಟದಿಂದ ಸ್ಥಳೀಯ ನಿವಾಸಿಗಳು ಬೇಸತ್ತು ಹಿಡಿ ಶಾಪ ಹಾಕುವಂತಾಗಿದೆ ಅಷ್ಟೇ ಅಲ್ಲದೇ ತಕ್ಷಣ ಈ ವಿಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಮಣ್ಣು ತಗೆದು ಸ್ಥಳೀಯರಿಗೆ ಸರಿಯಾದ ರಸ್ತೆ ನಿರ್ಮಿಸಿಕೊಡಬೇಕು ಇಲ್ಲವಾದರೆ ಈ ಕಾಮಗಾರಿಯನ್ನೇ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ : ಶಿವು
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…