Latest

ಹಗಲಿನಲ್ಲಿ ನೊಣ, ರಾತ್ರೀ ಸೊಳ್ಳೆ ಕಾಟದಿಂದ ಬೇಸತ್ತ ನವಲಗುಂದ ನಿವಾಸಿಗಳು.

ಧಾರವಾಡ ಜಿಲ್ಲೆಯ ನವಲಗುಂದ ವ್ಯಾಪ್ತಿಯ ಬಸವೇಶ್ವರನಗರದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯ ಉಪಯೋಗಕ್ಕೆ ತರಿಸಿಕೊಂಡಿದ್ದ ಮಣ್ಣು ರಸ್ತೆಯ ಪಕ್ಕದ ಚರಂಡಿಯಲ್ಲಿ ಬಿದ್ದು ಸ್ಥಳೀಯರ ನಿದ್ದೆ ಕೆಡಿಸುವಂತಾಗಿದೆ ಇದನ್ನು ಸ್ಥಳೀಯ ಗುತ್ತಿಗೆದಾರರು ಹಾಗೂ ನವಲಗುಂದ ಪುರಸಭೆ ಅಧಿಕಾರಿಗಳು ಕಂಡರೂ ಕಾಣದಂತೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ . ಕಳೆದ 8-10 ದಿನಗಳಿಂದ ಬಸವೇಶ್ವರ ನಗರದಲ್ಲಿ ಭರದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇತ್ತೀಚೆಗೆ ಯಾಕೋ ವಿಳಂಬವಾಗಿಬಿಟ್ಟಿದೆ ಮತ್ತು ಈ ಕಾಮಗಾರಿಗೆ ತರಿಸಿಕೊಂದಿದ್ದ ಗರಸು ಮಣ್ಣು ರಸ್ತೆ ಪಕ್ಕದಲ್ಲಿ ಚರಂಡಿಯಲ್ಲಿ ಬಿದ್ದಿದ್ದು ಸ್ಥಳೀಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ಚರಂಡಿಯಲ್ಲಿ ಬಿದ್ದಿರುವ ಮಣ್ಣನ್ನು ತೆಗೆಯಿರಿ ಕ್ರಿಮಿ ಕೀಟಗಳು ಉತ್ಪತ್ತಿಯಾಗಿ ಸಮಸ್ಯೆ ಆಗುತ್ತದೆ ಎಂದೂ ಕೇಳಿಕೊಂಡರು ಅಧಿಕಾರಿಗಳ ಇತ್ತ ಗಮನ ಹರಿಸುತ್ತಿಲ್ಲ. ಇನ್ನೂ ಮಣ್ಣು ಬಿದ್ದಿರುವ ಈ ಚರಂಡಿಯಲ್ಲಿ ಚರಂಡಿಯ ಮೂಲಕ ಹರಿದುಕೊಂಡು ಬಂದ ಕೊಳಕು ನೀರು ಒಂದೇ ಕಡೆ ಸಂಗ್ರಹವಾಗಿ ಬೆಳಿಗ್ಗೆ ಸಮಯದಲ್ಲಿ ನೊಣಗಳ ಕಾಟ ರಾತ್ರಿ ಸಮಯದಲ್ಲಿ ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಈ ಕಾಟದಿಂದ ಸ್ಥಳೀಯ ನಿವಾಸಿಗಳು ಬೇಸತ್ತು ಹಿಡಿ ಶಾಪ ಹಾಕುವಂತಾಗಿದೆ ಅಷ್ಟೇ ಅಲ್ಲದೇ ತಕ್ಷಣ ಈ ವಿಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಮಣ್ಣು ತಗೆದು ಸ್ಥಳೀಯರಿಗೆ ಸರಿಯಾದ ರಸ್ತೆ ನಿರ್ಮಿಸಿಕೊಡಬೇಕು ಇಲ್ಲವಾದರೆ ಈ ಕಾಮಗಾರಿಯನ್ನೇ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ : ಶಿವು

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

6 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

6 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

6 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

6 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

6 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

7 hours ago