Latest

ಚಿನ್ನದ ಕಳವಿಗೆ ಪ್ರತಿಕ್ರಿಯೆ: ಗೆಳೆಯನ ಹತ್ಯೆ, ನಾಲ್ವರು ಬಂಧನ ಓರ್ವ ಪರಾರಿ”

ಮೈಸೂರಿನಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಯುವಕನ ಭೀಕರ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಚಿನ್ನದ ಸರ ಕಳವು ಮಾಡಿದ ಕಾರಣಕ್ಕೆ ಗೆಳೆಯನೇ ಯುವಕನನ್ನು ಹತ್ಯೆಗೈದು, ಶವ ಸುಟ್ಟು ನಾಶಪಡಿಸಿದ್ದ ಕ್ರೂರತೆಯ ಹಿಂದೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಇನ್ನೂ ಎಸ್ಕೇಪ್ ಆಗಿದ್ದಾನೆ.

ಹತ್ಯೆಯಾದ ಯುವಕ ಚಾಮರಾಜನಗರ ಜಿಲ್ಲೆಯ ಬ್ಯಾಡರಪುರದ ನಿವಾಸಿ ಮೋಹನ್ ಕುಮಾರ್ (31). ಮೈಸೂರಿನ ಬೋಗಾದಿಯ ಲಾಡ್ಜ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಅದೇ ಲಾಡ್ಜ್‌ಗೆ ಇಸ್ಪೀಟ್ ಆಟವಾಡಲು ಬರುತ್ತಿದ್ದ ಶ್ರೀನಿವಾಸ್ ಎಂಬಾತನು, ಜೂಜಿಗೆ ಬೇಕೆಂದು ತನ್ನ ಪತ್ನಿಯ 60 ಗ್ರಾಂ ಚಿನ್ನದ ಸರ ತಂದಿದ್ದ. ಆದರೆ ಆ ಚಿನ್ನದ ಸರವನ್ನು ಮೋಹನ್ ಕುಮಾರ್ ಕದ್ದಿದ್ದಾನೆ ಎಂಬ ಶಂಕೆಯಿಂದ ಶ್ರೀನಿವಾಸ್ ಕೋಪಗೊಂಡಿದ್ದ.

ಚಿನ್ನ ಕಳವು ಮಾಡಿದ ಮೋಹನ್ ಕುಮಾರ್, ಅದನ್ನು ಗಿರವಿಯಾಗಿ ಇಟ್ಟು ತನ್ನ ಸ್ವಗ್ರಾಮ ಬ್ಯಾಡರಪುರಕ್ಕೆ ತೆರಳಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಶ್ರೀನಿವಾಸನಿಗೆ ದೊರಕಿದ ನಂತರ, ಆತ ತನ್ನ ಗೆಳೆಯರ ಜತೆಗೂಡಿ ಪ್ಲಾನ್ ರೂಪಿಸುತ್ತಾನೆ.

ಮೋಹನ್ ಕುಮಾರ್ನನ್ನು ಮನೆಯಿಂದ ಕರೆದು, ಕಾರಿನಲ್ಲಿ ಎಳೆದೊಯ್ದು ಮಾರಕವಾಗ ಹಲ್ಲೆ ಮಾಡಿ ಹತ್ಯೆ ಮಾಡಲಾಗುತ್ತದೆ. ಬಳಿಕ ಶವವನ್ನು ಮೈಸೂರು ತಾಲೂಕಿನ ಗುಮಚನಹಳ್ಳಿ ಬಳಿ ಸುಟ್ಟು ಹಾಕಿ ಆರೋಪಿಗಳು ಪರಾರಿಯಾಗುತ್ತಾರೆ.

ಈ ಕುರಿತು ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಿರುಸಿನ ತನಿಖೆ ನಡೆಸಿದ ಫಲವಾಗಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಹತ್ಯೆ ಪ್ರಕರಣದ ಪ್ರಮುಖ ಮಾಸ್ಟರ್‌ಮೈಂಡ್ ಶ್ರೀನಿವಾಸ್ ಇನ್ನೂ ಪರಾರಿಯಾಗಿದ್ದು, ಪೊಲೀಸರು ಅವನ ಶೋಧ ಕಾರ್ಯ ಮುಂದುವರಿಸಿದ್ದಾರೆ.

 

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago