Categories: Latest

ಚಿನ್ನಸ್ವಾಮಿ ದುರಂತದ ಹೊಣೆ: ಕಮಿಷನರ್ ಅಮಾನತು ವಿರೋಧಿಸಿ ಕಾನ್ಸ್‌ಟೇಬಲ್ ನರಸಿಂಹರಾಜು ರಾಜಭವನದ ಮುಂದೆ ಟ ಪ್ರತಿಭಟನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಪೊಲೀಸರು ಹೊಣೆ ಎಂಬ ಸರ್ಕಾರಿ ನಿರ್ಧಾರದ ವಿರುದ್ಧ ಪೊಲೀಸ್ ಇಲಾಖೆ ಒಳಗೆ ಅಸಮಾಧಾನ ಭುಗಿಲೆದ್ದುಬಿಟ್ಟಿದೆ. ಈ ಕ್ರಮದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದ್ದು, ಇದರ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನರಸಿಂಹರಾಜು ಅನನ್ಯ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ರಾಜಭವನದ ಎದುರು ಅಂಬೇಡ್ಕರ್ ಭಾವಚಿತ್ರವೊಂದನ್ನು ಹಿಡಿದು ನಿಂತ ಅವರು, “ನಮ್ಮ ಕಮಿಷನರ್ ವಿರುದ್ಧದ ಕ್ರಮವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು,” ಎಂಬ ಘೋಷಣೆ ಕೂಗಿದರು. ಆರ್‌ಸಿಬಿ ತಂಡದ ಸನ್ಮಾನ ಕಾರ್ಯಕ್ರಮವನ್ನು ತುರ್ತಾಗಿ ಆಯೋಜಿಸಲು ಸರ್ಕಾರವೇ ಒತ್ತಡ ಹೇರಿದ್ದರೂ, ಅದೇ ದಿನ ನಡೆದ ಅವ್ಯವಸ್ಥೆಗೂ ಹೊಣೆಗಾರರನ್ನಾಗಿ ಪೊಲೀಸರನ್ನೇ ಮಾಡಲಾಗಿದೆ ಎಂಬ ಆರೋಪ ಅವರದು.

ಸರ್ಕಾರದ ತೀರ್ಮಾನದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಾವೇ ವಿಮಾನ ನಿಲ್ದಾಣಕ್ಕೆ ತೆರಳಿ ಆಟಗಾರರನ್ನು ಬರಮಾಡಿಕೊಂಡಿದ್ದರು. ಈ ಸಮಯದಲ್ಲಿ ಪೊಲೀಸ್ ಇಲಾಖೆಗೆ ಸಾಧ್ಯವಾದಷ್ಟು ಸುರಕ್ಷತೆ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಜನಸಂದಣಿಯಿಂದಾಗಿ ನಿಯಂತ್ರಣ ತಪ್ಪಿದ ಘಟನೆ ದುರಂತವನ್ನಾಗಿ ಮಾರ್ಪಟ್ಟಿತು.

ಪ್ರತಿಭಟನೆ ನಡೆಸಿದ ನಂತರ ವಿಧಾನಸೌಧ ಪೊಲೀಸರು ನರಸಿಂಹರಾಜು ಅವರನ್ನು ವಶಕ್ಕೆ ತೆಗೆದುಕೊಂಡು, ಮತ್ತೆ ಈ ರೀತಿಯ ವರ್ತನೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯ ಜೊತೆಗೆ ತಪ್ಪೊಪ್ಪಿಗೆ ಪತ್ರ ಬರೆಸಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಈ ಘಟನೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡುವಿನ ನಂಬಿಕೆಯೊಳಗಿನ ಬಿರುಕು ತೋರಿಸುತ್ತಿದ್ದು, ಇದು ಮುಂದೆ ಏನೆಲ್ಲಾ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತದೋ ಅನ್ನುವ ಪ್ರಶ್ನೆ ಉದ್ಭವಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago