Latest

ಬಳ್ಳಾರಿ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆಗೆ ನಿರ್ಬಂಧ: ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಆದೇಶ

ಬಳ್ಳಾರಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ, ಕೆಲ ಗ್ರಾಮಗಳಲ್ಲಿ ಜೂನ್ 27ರಿಂದ ಜುಲೈ 7ರವರೆಗೆ ಮೊಹರಂ ಹಬ್ಬದ ಆಚರಣೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಪ್ರಶಾಂತಕುಮಾರ್ ಮಿಶ್ರಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪ್ರಶಾಸನದ ಮಾಹಿತಿಯಂತೆ, ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಶಾಂತಿಯುತ ಪರಿಸ್ಥಿತಿಗೆ ಧಕ್ಕೆಯಾಗುವ ಸಾಧ್ಯತೆಗಳಿರುವ ಬಗ್ಗೆ ಪೂರ್ವಾನುಮಾನವಿದ್ದು, ಮುಂಜಾಗೃತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕ ಭದ್ರತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್ 35(ಎ), (ಬಿ), (ಡಿ), (ಇ) ಅಡಿಯಲ್ಲಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಾವಧಿಯಂದು ನಿಷಿದ್ಧ ಪ್ರದೇಶಗಳಲ್ಲಿ ಯಾವುದೇ ಮೆರವಣಿಗೆಗಳು, ಸಾರ್ವಜನಿಕ ಸಭೆಗಳು, ಹಾಗೂ ಪಂಜಾ ಪ್ರತಿಷ್ಠಾಪನೆಗಳು ಅಥವಾ ಇತರ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ.

ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಗಳು ಈ ಕೆಳಕಂಡಂತಿವೆ:

ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿ: ತಾಳೂರು ರಸ್ತೆ, ಕನ್ನಡ ನಗರ ಮುಖ್ಯ ರಸ್ತೆ, ನ್ಯಾಯಾಧೀಶರ ವಸತಿಗೃಹದ ಬಳಿ ಇರುವ ಮಹಾನಂದಿಕೊಟ್ಟ ಪ್ರದೇಶ.

ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿ: ಕೆ. ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ. ಬೆಳಗಲ್, ಅಲಬನೂರು.

ತೆಕ್ಕಲಕೋಟೆ ಠಾಣೆ ವ್ಯಾಪ್ತಿ: ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು.

ಸಿರಿಗೇರಿ ಠಾಣೆ ವ್ಯಾಪ್ತಿ: ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು.

ಪಿಡಿ ಹಳ್ಳಿ ಠಾಣೆ ವ್ಯಾಪ್ತಿ: ಅಸುಂಡಿ ಗ್ರಾಮ.

ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿ: ನಂ.15-ಗೋನಾಳು ಗ್ರಾಮ.

ಈ ನಿಷೇಧಾಜ್ಞೆ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago