Crime

ಫಾಜಿಲ್ ಹತ್ಯೆಗೆ ಪ್ರತೀಕಾರ? ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಗೆ ಮಚ್ಚಿನಿಂದ ಕೊಚ್ಚಿ ಹಾಕಿದ ದುಷ್ಕರ್ಮಿಗಳು.

ಮಂಗಳೂರು: ನಗರದ ಬಜಪೆ ಬಳಿ ಗುರುವಾರ ರಾತ್ರಿ ನಡೆದ ದಾಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕ್ರೂರವಾಗಿ ಹತ್ಯೆಗೊಂಡಿದ್ದಾರೆ. ಕಾರನ್ನು ಅಡ್ಡಗಟ್ಟಿ ತಲ್ವಾರ್‌ಗಳಿಂದ ನಡೆಸಿದ ಭೀಕರ ಹಲ್ಲೆಯಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರಿನ ಬಜಪೆ ಕಿನ್ನಿಪದವು ಎಂಬಲ್ಲಿ ಈ ಘಟನೆ ನಡೆದಿದೆ.

ಸುಹಾಸ್ ಶೆಟ್ಟಿ 2022ರಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂಬ ಮಾಹಿತಿ ಇದ್ದು, ಈ ಹತ್ಯೆ ಆ ಪ್ರಕರಣಕ್ಕೆ ಪ್ರತೀಕಾರವಾಗಿರಬಹುದೆಂದು ಶಂಕಿಸಲಾಗಿದೆ. ಘಟನೆಯ ಬಳಿಕ ನೂರಾರು ಹಿಂದೂ ಕಾರ್ಯಕರ್ತರು ಎ.ಜೆ. ಆಸ್ಪತ್ರೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಹತ್ಯೆ ಸುದ್ದಿಯೊಂದಿಗೆ ಬಿಜೆಪಿ ನಾಯಕರು ಆಸ್ಪತ್ರೆಗೆ ಧಾವಿಸಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಸೇರಿದಂತೆ ಪ್ರಮುಖರು ಘಟನೆಯ ಕುರಿತು ಮಾಹಿತಿ ಪಡೆದು, ಕುಟುಂಬಕ್ಕೆ ಸಾಂತ್ವನೆ ನೀಡಿದ್ದಾರೆ.

2022ರಲ್ಲಿ ದಕ್ಷಿಣ ಕನ್ನಡದ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರನ್ನು ದುಷ್ಕರ್ಮಿಗಳು ಹತ್ಯೆಗೊಳಿಸಿದ್ದರು. ಆ ಘಟನೆಗೆ ಪ್ರತೀಕಾರವಾಗಿ ಫಾಜಿಲ್ ಎಂಬ ಯುವಕನನ್ನು ಸುರತ್ಕಲ್‌ನಲ್ಲಿ ಕೊಲ್ಲಲಾಗಿತ್ತು. ಈಗ ಫಾಜಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿಯ ಕೊಲೆಯಿಂದ ಮತ್ತೆ ಕೋಮುಪರ ಹಿಂಸೆಕೋರ ಘಟನೆಗಳು ಚರ್ಚೆಗೆ ಬಿದ್ದಿವೆ.

ಬಜಪೆ ಠಾಣೆಯ ರೌಡಿಶೀಟರ್ ಆಗಿದ್ದ ಸುಹಾಸ್ ಶೆಟ್ಟಿ ಹಾಗೂ ಅಭಿಷೇಕ್ ಎಂಬುವವರ ಹೆಸರು ಪ್ರಕರಣದ ಸಂಚುಕರರಾಗಿ ಕೇಳಿಬರುತ್ತಿದ್ದು, ಪೊಲೀಸರು ನಿಖರ ಮಾಹಿತಿ ನೀಡಲು ತನಿಖೆ ಮುಂದುವರೆಸಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡಲು ಭಾರೀ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

16 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

16 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago