ಮಂಗಳೂರು: ನಗರದ ಬಜಪೆ ಬಳಿ ಗುರುವಾರ ರಾತ್ರಿ ನಡೆದ ದಾಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕ್ರೂರವಾಗಿ ಹತ್ಯೆಗೊಂಡಿದ್ದಾರೆ. ಕಾರನ್ನು ಅಡ್ಡಗಟ್ಟಿ ತಲ್ವಾರ್ಗಳಿಂದ ನಡೆಸಿದ ಭೀಕರ ಹಲ್ಲೆಯಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರಿನ ಬಜಪೆ ಕಿನ್ನಿಪದವು ಎಂಬಲ್ಲಿ ಈ ಘಟನೆ ನಡೆದಿದೆ.
ಸುಹಾಸ್ ಶೆಟ್ಟಿ 2022ರಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂಬ ಮಾಹಿತಿ ಇದ್ದು, ಈ ಹತ್ಯೆ ಆ ಪ್ರಕರಣಕ್ಕೆ ಪ್ರತೀಕಾರವಾಗಿರಬಹುದೆಂದು ಶಂಕಿಸಲಾಗಿದೆ. ಘಟನೆಯ ಬಳಿಕ ನೂರಾರು ಹಿಂದೂ ಕಾರ್ಯಕರ್ತರು ಎ.ಜೆ. ಆಸ್ಪತ್ರೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಹತ್ಯೆ ಸುದ್ದಿಯೊಂದಿಗೆ ಬಿಜೆಪಿ ನಾಯಕರು ಆಸ್ಪತ್ರೆಗೆ ಧಾವಿಸಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಸೇರಿದಂತೆ ಪ್ರಮುಖರು ಘಟನೆಯ ಕುರಿತು ಮಾಹಿತಿ ಪಡೆದು, ಕುಟುಂಬಕ್ಕೆ ಸಾಂತ್ವನೆ ನೀಡಿದ್ದಾರೆ.
2022ರಲ್ಲಿ ದಕ್ಷಿಣ ಕನ್ನಡದ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರನ್ನು ದುಷ್ಕರ್ಮಿಗಳು ಹತ್ಯೆಗೊಳಿಸಿದ್ದರು. ಆ ಘಟನೆಗೆ ಪ್ರತೀಕಾರವಾಗಿ ಫಾಜಿಲ್ ಎಂಬ ಯುವಕನನ್ನು ಸುರತ್ಕಲ್ನಲ್ಲಿ ಕೊಲ್ಲಲಾಗಿತ್ತು. ಈಗ ಫಾಜಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿಯ ಕೊಲೆಯಿಂದ ಮತ್ತೆ ಕೋಮುಪರ ಹಿಂಸೆಕೋರ ಘಟನೆಗಳು ಚರ್ಚೆಗೆ ಬಿದ್ದಿವೆ.
ಬಜಪೆ ಠಾಣೆಯ ರೌಡಿಶೀಟರ್ ಆಗಿದ್ದ ಸುಹಾಸ್ ಶೆಟ್ಟಿ ಹಾಗೂ ಅಭಿಷೇಕ್ ಎಂಬುವವರ ಹೆಸರು ಪ್ರಕರಣದ ಸಂಚುಕರರಾಗಿ ಕೇಳಿಬರುತ್ತಿದ್ದು, ಪೊಲೀಸರು ನಿಖರ ಮಾಹಿತಿ ನೀಡಲು ತನಿಖೆ ಮುಂದುವರೆಸಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡಲು ಭಾರೀ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…