ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಿ ಮಾರಾಟ ಮಾಡಲು ಮುಂದಾಗಿದ್ದ ಮಾಫಿಯಾ ಜಾಲವೊಂದನ್ನು ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ವೇಳೆ ₹11.25 ಲಕ್ಷ ಮೌಲ್ಯದ 331 ಕ್ವಿಂಟಲ್‌ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ್ದ ಲಾರಿಗೆ ಪೊಲೀಸರು ಕಬ್ ಹಾಕಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67ರ ಜಂಬುನಾಥ ರಸ್ತೆಯ ಕಿರು ಸೇತುವೆ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ, ಪಡಿತರ ಅಂಗಡಿಗೆ ಸೀಮಿತವಾಗಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಅವರ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಲಾರಿ ಚಾಲಕನ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಳ್ಳಲಾದ ಲಾರಿಯ ಮೌಲ್ಯ ಸುಮಾರು ₹25 ಲಕ್ಷ ಎಂದು ಅಂದಾಜಿಸಲಾಗಿದೆ.

ಅಕ್ಕಿಯು ಬಳ್ಳಾರಿ ಜಿಲ್ಲೆಗೆ ಪೂರೈಕೆಯಾದ ಪಡಿತರ ಅಕ್ಕಿಯಾಗಿದ್ದು, ಅದನ್ನು ಕಾನೂನು ಬಾಹಿರವಾಗಿ ರಾಯಚೂರಿಗೆ ಸಾಗಿಸಲು ಯತ್ನಿಸುತ್ತಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಈ ಘಟನೆ ಹಿನ್ನೆಲೆಯಲ್ಲಿ ಮತ್ತಷ್ಟು ಆರೋಪಿಗಳು ಇಡೀ ಜಾಲದ ಹಿಂದೆ ಇರುವ ಸಾಧ್ಯತೆ ಇದೆ ಎಂಬ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದು, ತನಿಖೆ ಮುಂದುವರೆದಿದೆ.

Related News

error: Content is protected !!