ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಿ ಮಾರಾಟ ಮಾಡಲು ಮುಂದಾಗಿದ್ದ ಮಾಫಿಯಾ ಜಾಲವೊಂದನ್ನು ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ವೇಳೆ ₹11.25 ಲಕ್ಷ ಮೌಲ್ಯದ 331 ಕ್ವಿಂಟಲ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ್ದ ಲಾರಿಗೆ ಪೊಲೀಸರು ಕಬ್ ಹಾಕಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67ರ ಜಂಬುನಾಥ ರಸ್ತೆಯ ಕಿರು ಸೇತುವೆ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ, ಪಡಿತರ ಅಂಗಡಿಗೆ ಸೀಮಿತವಾಗಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಅವರ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಲಾರಿ ಚಾಲಕನ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಳ್ಳಲಾದ ಲಾರಿಯ ಮೌಲ್ಯ ಸುಮಾರು ₹25 ಲಕ್ಷ ಎಂದು ಅಂದಾಜಿಸಲಾಗಿದೆ.
ಅಕ್ಕಿಯು ಬಳ್ಳಾರಿ ಜಿಲ್ಲೆಗೆ ಪೂರೈಕೆಯಾದ ಪಡಿತರ ಅಕ್ಕಿಯಾಗಿದ್ದು, ಅದನ್ನು ಕಾನೂನು ಬಾಹಿರವಾಗಿ ರಾಯಚೂರಿಗೆ ಸಾಗಿಸಲು ಯತ್ನಿಸುತ್ತಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಈ ಘಟನೆ ಹಿನ್ನೆಲೆಯಲ್ಲಿ ಮತ್ತಷ್ಟು ಆರೋಪಿಗಳು ಇಡೀ ಜಾಲದ ಹಿಂದೆ ಇರುವ ಸಾಧ್ಯತೆ ಇದೆ ಎಂಬ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದು, ತನಿಖೆ ಮುಂದುವರೆದಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…