Latest

ಮಂಡ್ಯದಲ್ಲಿ ಅಕ್ಕಿ ಲೂಟಿ ಶಾಕ್: ಪಡಿತರ ಗೋದಾಮಿಗೆ ದುಷ್ಕರ್ಮಿಗಳ ದಾಳಿ

ಮಂಡ್ಯ: ನಗರದ ಮಳವಳ್ಳಿ ರಸ್ತೆಯಲ್ಲಿರುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಪಡಿತರ ಗೋದಾಮಿನಲ್ಲಿ ಸೋಮವಾರ ರಾತ್ರಿ ಬೃಹತ್ ಕಳ್ಳತನ ನಡೆದಿದ್ದು, ದುಷ್ಕರ್ಮಿಗಳ ತಂಡ ಪಡಿತರ ಅಕ್ಕಿಯನ್ನು ಲೂಟಿ ಮಾಡಿಕೊಂಡು ಪರಾರಿಯಾದ ಭಯಾನಕ ಘಟನೆ ಬೆಳಕಿಗೆ ಬಂದಿದೆ.

ಪ್ರೊ. ಎಂ.ಡಿ. ನಂಜುಂಡಸ್ವಾಮಿ ಪ್ರತಿಮೆ ಸಮೀಪದ ಗೋದಾಮು ಟಿಎಪಿಸಿಎಂಎಸ್ ನಿಗಮದಾದ್ದಾಗಿದೆ. ಆಹಾರ ಇಲಾಖೆ ಈ ಗೋದಾಮನ್ನು ಬಾಡಿಗೆ ಆಧಾರದ ಮೇಲೆ ಪಡೆದು, ಮದ್ದೂರು ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಧಾನ್ಯವನ್ನು ದಾಸ್ತಾನು ಮಾಡುತ್ತಿದೆ.

ಮಧ್ಯರಾತ್ರಿ ಲಾರಿಯಲ್ಲಿ ಬಂದ ಸುಮಾರು 6-7 ಮಂದಿಯ ದುಷ್ಕರ್ಮಿಗಳ ತಂಡ, ಗೋದಾಮಿನ ರೋಲಿಂಗ್ ಶಟರ್‌ಗೆ ಹಾಕಲಾಗಿದ್ದ ಎರಡು ಬೀಗಗಳನ್ನು ಕಬ್ಬಿಣದ ಹಾರದಿಂದ ಮುರಿದು ಒಳನುಗ್ಗಿದೆ. ನಂತರ, ಸುಮಾರು ₹1.64 ಲಕ್ಷ ಮೌಲ್ಯದ 94 ಚೀಲ (ಪ್ರತಿಯೊಂದು 54 ಕೆಜಿ) ಅಕ್ಕಿಯನ್ನು ಎತ್ತಿ ಮಿನಿ ಲಾರಿಗೆ ತುಂಬಿಸಿಕೊಂಡು ತಕ್ಷಣವೇ ಸ್ಥಳದಿಂದ ಪರಾರಿಯಾಗಿದೆ.

ಘಟನೆ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಕೈಯಲ್ಲಿ ಹೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗೋದಾಮಿನ ಹೊರಗೆ ಅಥವಾ ಒಳಗೆ ಯಾವುದೇ ಸಿಸಿಟಿವಿ ಕ್ಯಾಮೆರಾ ಅಥವಾ ಭದ್ರತಾ ಸಿಬ್ಬಂದಿ ಇರದಿರುವುದು ಈ ಕೃತ್ಯಕ್ಕೆ ಅನುಕೂಲವಾಗಿದೆ ಎಂಬ ಶಂಕೆ ಪೊಲೀಸರದು.

ಪೊಲೀಸರು ಸ್ಥಳದಿಂದ ಒಂದು ದೊಡ್ಡ ಲಾಂಗ್, ಕಬ್ಬಿಣದ ರಾಡು ಮತ್ತು ಇನ್ನೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೋದಾಮಿನ ಮ್ಯಾನೇಜರ್ ನಟರಾಜು ಅವರ ದೂರಿನ ಮೇಲೆ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ಜಿಲ್ಲೆ ಆಧಿಪತ್ಯದ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಜಂಟಿ ನಿರ್ದೇಶಕ ಕೃಷ್ಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಸುತ್ತಲ ಪ್ರದೇಶದ ಲಾರಿಗಳ ಚಲನಾಚಲನೆಯನ್ನು ನಿಖರವಾಗಿ ಪರಿಶೀಲಿಸಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ನಿಖರ ಸುಳಿವು ಸಿಗಲಿದೆ ಎಂಬ ನಿರೀಕ್ಷೆಯಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago