Latest

ಮಂಡ್ಯದಲ್ಲಿ ಅಕ್ಕಿ ಲೂಟಿ ಶಾಕ್: ಪಡಿತರ ಗೋದಾಮಿಗೆ ದುಷ್ಕರ್ಮಿಗಳ ದಾಳಿ

ಮಂಡ್ಯ: ನಗರದ ಮಳವಳ್ಳಿ ರಸ್ತೆಯಲ್ಲಿರುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಪಡಿತರ ಗೋದಾಮಿನಲ್ಲಿ ಸೋಮವಾರ ರಾತ್ರಿ ಬೃಹತ್ ಕಳ್ಳತನ ನಡೆದಿದ್ದು, ದುಷ್ಕರ್ಮಿಗಳ ತಂಡ ಪಡಿತರ ಅಕ್ಕಿಯನ್ನು ಲೂಟಿ ಮಾಡಿಕೊಂಡು ಪರಾರಿಯಾದ ಭಯಾನಕ ಘಟನೆ ಬೆಳಕಿಗೆ ಬಂದಿದೆ.

ಪ್ರೊ. ಎಂ.ಡಿ. ನಂಜುಂಡಸ್ವಾಮಿ ಪ್ರತಿಮೆ ಸಮೀಪದ ಗೋದಾಮು ಟಿಎಪಿಸಿಎಂಎಸ್ ನಿಗಮದಾದ್ದಾಗಿದೆ. ಆಹಾರ ಇಲಾಖೆ ಈ ಗೋದಾಮನ್ನು ಬಾಡಿಗೆ ಆಧಾರದ ಮೇಲೆ ಪಡೆದು, ಮದ್ದೂರು ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಧಾನ್ಯವನ್ನು ದಾಸ್ತಾನು ಮಾಡುತ್ತಿದೆ.

ಮಧ್ಯರಾತ್ರಿ ಲಾರಿಯಲ್ಲಿ ಬಂದ ಸುಮಾರು 6-7 ಮಂದಿಯ ದುಷ್ಕರ್ಮಿಗಳ ತಂಡ, ಗೋದಾಮಿನ ರೋಲಿಂಗ್ ಶಟರ್‌ಗೆ ಹಾಕಲಾಗಿದ್ದ ಎರಡು ಬೀಗಗಳನ್ನು ಕಬ್ಬಿಣದ ಹಾರದಿಂದ ಮುರಿದು ಒಳನುಗ್ಗಿದೆ. ನಂತರ, ಸುಮಾರು ₹1.64 ಲಕ್ಷ ಮೌಲ್ಯದ 94 ಚೀಲ (ಪ್ರತಿಯೊಂದು 54 ಕೆಜಿ) ಅಕ್ಕಿಯನ್ನು ಎತ್ತಿ ಮಿನಿ ಲಾರಿಗೆ ತುಂಬಿಸಿಕೊಂಡು ತಕ್ಷಣವೇ ಸ್ಥಳದಿಂದ ಪರಾರಿಯಾಗಿದೆ.

ಘಟನೆ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಕೈಯಲ್ಲಿ ಹೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗೋದಾಮಿನ ಹೊರಗೆ ಅಥವಾ ಒಳಗೆ ಯಾವುದೇ ಸಿಸಿಟಿವಿ ಕ್ಯಾಮೆರಾ ಅಥವಾ ಭದ್ರತಾ ಸಿಬ್ಬಂದಿ ಇರದಿರುವುದು ಈ ಕೃತ್ಯಕ್ಕೆ ಅನುಕೂಲವಾಗಿದೆ ಎಂಬ ಶಂಕೆ ಪೊಲೀಸರದು.

ಪೊಲೀಸರು ಸ್ಥಳದಿಂದ ಒಂದು ದೊಡ್ಡ ಲಾಂಗ್, ಕಬ್ಬಿಣದ ರಾಡು ಮತ್ತು ಇನ್ನೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೋದಾಮಿನ ಮ್ಯಾನೇಜರ್ ನಟರಾಜು ಅವರ ದೂರಿನ ಮೇಲೆ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ಜಿಲ್ಲೆ ಆಧಿಪತ್ಯದ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಜಂಟಿ ನಿರ್ದೇಶಕ ಕೃಷ್ಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಸುತ್ತಲ ಪ್ರದೇಶದ ಲಾರಿಗಳ ಚಲನಾಚಲನೆಯನ್ನು ನಿಖರವಾಗಿ ಪರಿಶೀಲಿಸಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ನಿಖರ ಸುಳಿವು ಸಿಗಲಿದೆ ಎಂಬ ನಿರೀಕ್ಷೆಯಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

4 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

4 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

15 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

15 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

15 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

15 hours ago