Corruption

ಹೆಲ್ಮೆಟ್ ಇಲ್ಲದ ಸವಾರನಿಗೆ ದಂಡದ ಬೆದರಿಕೆ – ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಶಿರಸಿ ಪೊಲೀಸ್ ಅಮಾನತ್ತು..!

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರಶೇಖರ್ ಹುದ್ದಾರ್, ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದಾರೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಸವಾರನನ್ನು ತಡೆದು, ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಲಂಚ ಪಡೆದ ಘಟನೆಯ ವಿಡಿಯೋ ವೈರಲ್ ಆದ ಹಿನ್ನಲೆ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ. ನಾರಾಯಣ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ

ಮೂರು ದಿನಗಳ ಹಿಂದೆ, ಶಿರಸಿಯ ಅಮಿನಳ್ಳಿಯ ಯುವಕರಿಬ್ಬರು ಆಸ್ಪತ್ರೆಗೆ ಹೋಗುವಾಗ, ತಪಾಸಣೆ ನಡೆಸುತ್ತಿದ್ದ ಪೊಲೀಸರು ಅವರನ್ನು ತಡೆದರು. ಚಂದ್ರಶೇಖರ್ ಹುದ್ದಾರ್ ಅವರು ಬೈಕ್‌ಗೆ ವಿಮೆ, ಹೊಗೆ ತಪಾಸಣಾ ಪತ್ರ ಇಲ್ಲದೆ ಇರುವುದನ್ನು ಹಾಗೂ ಸವಾರರು ಹೆಲ್ಮೆಟ್ ಧರಿಸದಿರುವುದನ್ನು ಪ್ರಶ್ನಿಸಿದರು.

ಆರಂಭದಲ್ಲಿ ಅವರ ಮಾತುಗಳು ಪೋಲಿಸರ ಪಾಠ ಶೈಲಿಯಲ್ಲಿತ್ತು –

“ಸಾವಿರ ರೂಪಾಯಿ ದಂಡ ಎದೆ ಹಿಡಿಯಬಹುದು, ಆದರೆ ಹೆಲ್ಮೆಟ್ ಇಲ್ಲದೆ ಅಪಘಾತವಾದರೆ 10-15 ಲಕ್ಷ ರೂ. ಖರ್ಚಾಗಬಹುದು”

“ಹೆಲ್ಮೆಟ್ ಧರಿಸದೆ ಅಪಘಾತವಾದರೆ, ನಿಮ್ಮ ಕುಟುಂಬದವರ ಪರಿಸ್ಥಿತಿ ಹೇಗಾಗಬಹುದು?”

ಈ ಮಾತುಗಳ ಬಳಿಕ, ಅವರು ಕೋರ್ಟಿಗೆ ಕೇಸ್ ಹಾಕಬೇಕೆಂದು ಸೂಚಿಸಿದರು. ಆದರೆ, ಯುವಕರು ತಪ್ಪು ಮಾಡಿದ್ದಾಗಿ ಒಪ್ಪಿಕೊಂಡು ದಂಡವನ್ನು ತಪ್ಪಿಸಲು ಲಂಚ ನೀಡಲು ಪ್ರಯತ್ನಿಸಿದರು.

ಕೊನೆ ಕ್ಷಣದಲ್ಲಿ ಕೈ ಒಡ್ಡಿದ ಕಾನ್ಸ್ಟೇಬಲ್!

ಆರಂಭದಲ್ಲಿ ಲಂಚ ತೆಗೆದುಕೊಳ್ಳಲು ನಿರಾಕರಿಸಿದ್ದ ಚಂದ್ರಶೇಖರ್ ಹುದ್ದಾರ್, ಕೊನೆಗೆ ಆ ಹಣ ಸ್ವೀಕರಿಸಿದರು. ಆದರೆ, ಯುವಕರು ಈ ಎಲ್ಲ ಘಟನೆಗಳನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವೀಡಿಯೋ ವೈರಲ್ ಆದ ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು.

ಪೊಲೀಸ್ ಇಲಾಖೆ ಕಠಿಣ ಕ್ರಮ

ಪೊಲೀಸ್ ಅಧಿಕೃತ ಬಾಡಿ ಕ್ಯಾಮೆರಾ ಇರಲಿಲ್ಲ – ಇದು ನಿಯಮ ಉಲ್ಲಂಘನೆ

ಲಂಚ ಸ್ವೀಕರಿಸಿದ್ದ ದೃಶ್ಯ ಸಮಾಜ ಮಾಧ್ಯಮಗಳಲ್ಲಿ ಭಾರೀ ಟೀಕೆಗೊಳಪಟ್ಟಿತು

ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧೀಕ್ಷಕ ಎಂ. ನಾರಾಯಣ, ಚಂದ್ರಶೇಖರ್ ಹುದ್ದಾರ್ ಅವರನ್ನು ತಕ್ಷಣ ಅಮಾನತು ಮಾಡುವ ಆದೇಶ ಹೊರಡಿಸಿದರು

ಈ ಘಟನೆ, ಲಂಚ ವಿರುದ್ಧದ ಹೋರಾಟಕ್ಕೆ ಮತ್ತೊಂದು ಎಚ್ಚರಿಕೆಯ ಸಂಕೇತವಾಗಿದೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago