Corruption

ಹೆಲ್ಮೆಟ್ ಇಲ್ಲದ ಸವಾರನಿಗೆ ದಂಡದ ಬೆದರಿಕೆ – ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಶಿರಸಿ ಪೊಲೀಸ್ ಅಮಾನತ್ತು..!

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರಶೇಖರ್ ಹುದ್ದಾರ್, ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದಾರೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಸವಾರನನ್ನು ತಡೆದು, ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಲಂಚ ಪಡೆದ ಘಟನೆಯ ವಿಡಿಯೋ ವೈರಲ್ ಆದ ಹಿನ್ನಲೆ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ. ನಾರಾಯಣ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ

ಮೂರು ದಿನಗಳ ಹಿಂದೆ, ಶಿರಸಿಯ ಅಮಿನಳ್ಳಿಯ ಯುವಕರಿಬ್ಬರು ಆಸ್ಪತ್ರೆಗೆ ಹೋಗುವಾಗ, ತಪಾಸಣೆ ನಡೆಸುತ್ತಿದ್ದ ಪೊಲೀಸರು ಅವರನ್ನು ತಡೆದರು. ಚಂದ್ರಶೇಖರ್ ಹುದ್ದಾರ್ ಅವರು ಬೈಕ್‌ಗೆ ವಿಮೆ, ಹೊಗೆ ತಪಾಸಣಾ ಪತ್ರ ಇಲ್ಲದೆ ಇರುವುದನ್ನು ಹಾಗೂ ಸವಾರರು ಹೆಲ್ಮೆಟ್ ಧರಿಸದಿರುವುದನ್ನು ಪ್ರಶ್ನಿಸಿದರು.

ಆರಂಭದಲ್ಲಿ ಅವರ ಮಾತುಗಳು ಪೋಲಿಸರ ಪಾಠ ಶೈಲಿಯಲ್ಲಿತ್ತು –

“ಸಾವಿರ ರೂಪಾಯಿ ದಂಡ ಎದೆ ಹಿಡಿಯಬಹುದು, ಆದರೆ ಹೆಲ್ಮೆಟ್ ಇಲ್ಲದೆ ಅಪಘಾತವಾದರೆ 10-15 ಲಕ್ಷ ರೂ. ಖರ್ಚಾಗಬಹುದು”

“ಹೆಲ್ಮೆಟ್ ಧರಿಸದೆ ಅಪಘಾತವಾದರೆ, ನಿಮ್ಮ ಕುಟುಂಬದವರ ಪರಿಸ್ಥಿತಿ ಹೇಗಾಗಬಹುದು?”

ಈ ಮಾತುಗಳ ಬಳಿಕ, ಅವರು ಕೋರ್ಟಿಗೆ ಕೇಸ್ ಹಾಕಬೇಕೆಂದು ಸೂಚಿಸಿದರು. ಆದರೆ, ಯುವಕರು ತಪ್ಪು ಮಾಡಿದ್ದಾಗಿ ಒಪ್ಪಿಕೊಂಡು ದಂಡವನ್ನು ತಪ್ಪಿಸಲು ಲಂಚ ನೀಡಲು ಪ್ರಯತ್ನಿಸಿದರು.

ಕೊನೆ ಕ್ಷಣದಲ್ಲಿ ಕೈ ಒಡ್ಡಿದ ಕಾನ್ಸ್ಟೇಬಲ್!

ಆರಂಭದಲ್ಲಿ ಲಂಚ ತೆಗೆದುಕೊಳ್ಳಲು ನಿರಾಕರಿಸಿದ್ದ ಚಂದ್ರಶೇಖರ್ ಹುದ್ದಾರ್, ಕೊನೆಗೆ ಆ ಹಣ ಸ್ವೀಕರಿಸಿದರು. ಆದರೆ, ಯುವಕರು ಈ ಎಲ್ಲ ಘಟನೆಗಳನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವೀಡಿಯೋ ವೈರಲ್ ಆದ ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು.

ಪೊಲೀಸ್ ಇಲಾಖೆ ಕಠಿಣ ಕ್ರಮ

ಪೊಲೀಸ್ ಅಧಿಕೃತ ಬಾಡಿ ಕ್ಯಾಮೆರಾ ಇರಲಿಲ್ಲ – ಇದು ನಿಯಮ ಉಲ್ಲಂಘನೆ

ಲಂಚ ಸ್ವೀಕರಿಸಿದ್ದ ದೃಶ್ಯ ಸಮಾಜ ಮಾಧ್ಯಮಗಳಲ್ಲಿ ಭಾರೀ ಟೀಕೆಗೊಳಪಟ್ಟಿತು

ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧೀಕ್ಷಕ ಎಂ. ನಾರಾಯಣ, ಚಂದ್ರಶೇಖರ್ ಹುದ್ದಾರ್ ಅವರನ್ನು ತಕ್ಷಣ ಅಮಾನತು ಮಾಡುವ ಆದೇಶ ಹೊರಡಿಸಿದರು

ಈ ಘಟನೆ, ಲಂಚ ವಿರುದ್ಧದ ಹೋರಾಟಕ್ಕೆ ಮತ್ತೊಂದು ಎಚ್ಚರಿಕೆಯ ಸಂಕೇತವಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

4 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

11 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

11 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago