ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರಶೇಖರ್ ಹುದ್ದಾರ್, ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದಾರೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಸವಾರನನ್ನು ತಡೆದು, ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಲಂಚ ಪಡೆದ ಘಟನೆಯ ವಿಡಿಯೋ ವೈರಲ್ ಆದ ಹಿನ್ನಲೆ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ. ನಾರಾಯಣ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಪ್ರಕರಣದ ವಿವರ
ಮೂರು ದಿನಗಳ ಹಿಂದೆ, ಶಿರಸಿಯ ಅಮಿನಳ್ಳಿಯ ಯುವಕರಿಬ್ಬರು ಆಸ್ಪತ್ರೆಗೆ ಹೋಗುವಾಗ, ತಪಾಸಣೆ ನಡೆಸುತ್ತಿದ್ದ ಪೊಲೀಸರು ಅವರನ್ನು ತಡೆದರು. ಚಂದ್ರಶೇಖರ್ ಹುದ್ದಾರ್ ಅವರು ಬೈಕ್ಗೆ ವಿಮೆ, ಹೊಗೆ ತಪಾಸಣಾ ಪತ್ರ ಇಲ್ಲದೆ ಇರುವುದನ್ನು ಹಾಗೂ ಸವಾರರು ಹೆಲ್ಮೆಟ್ ಧರಿಸದಿರುವುದನ್ನು ಪ್ರಶ್ನಿಸಿದರು.
ಆರಂಭದಲ್ಲಿ ಅವರ ಮಾತುಗಳು ಪೋಲಿಸರ ಪಾಠ ಶೈಲಿಯಲ್ಲಿತ್ತು –
“ಸಾವಿರ ರೂಪಾಯಿ ದಂಡ ಎದೆ ಹಿಡಿಯಬಹುದು, ಆದರೆ ಹೆಲ್ಮೆಟ್ ಇಲ್ಲದೆ ಅಪಘಾತವಾದರೆ 10-15 ಲಕ್ಷ ರೂ. ಖರ್ಚಾಗಬಹುದು”
“ಹೆಲ್ಮೆಟ್ ಧರಿಸದೆ ಅಪಘಾತವಾದರೆ, ನಿಮ್ಮ ಕುಟುಂಬದವರ ಪರಿಸ್ಥಿತಿ ಹೇಗಾಗಬಹುದು?”
ಈ ಮಾತುಗಳ ಬಳಿಕ, ಅವರು ಕೋರ್ಟಿಗೆ ಕೇಸ್ ಹಾಕಬೇಕೆಂದು ಸೂಚಿಸಿದರು. ಆದರೆ, ಯುವಕರು ತಪ್ಪು ಮಾಡಿದ್ದಾಗಿ ಒಪ್ಪಿಕೊಂಡು ದಂಡವನ್ನು ತಪ್ಪಿಸಲು ಲಂಚ ನೀಡಲು ಪ್ರಯತ್ನಿಸಿದರು.
ಕೊನೆ ಕ್ಷಣದಲ್ಲಿ ಕೈ ಒಡ್ಡಿದ ಕಾನ್ಸ್ಟೇಬಲ್!
ಆರಂಭದಲ್ಲಿ ಲಂಚ ತೆಗೆದುಕೊಳ್ಳಲು ನಿರಾಕರಿಸಿದ್ದ ಚಂದ್ರಶೇಖರ್ ಹುದ್ದಾರ್, ಕೊನೆಗೆ ಆ ಹಣ ಸ್ವೀಕರಿಸಿದರು. ಆದರೆ, ಯುವಕರು ಈ ಎಲ್ಲ ಘಟನೆಗಳನ್ನು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದರು. ಈ ವೀಡಿಯೋ ವೈರಲ್ ಆದ ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು.
ಪೊಲೀಸ್ ಇಲಾಖೆ ಕಠಿಣ ಕ್ರಮ
ಪೊಲೀಸ್ ಅಧಿಕೃತ ಬಾಡಿ ಕ್ಯಾಮೆರಾ ಇರಲಿಲ್ಲ – ಇದು ನಿಯಮ ಉಲ್ಲಂಘನೆ
ಲಂಚ ಸ್ವೀಕರಿಸಿದ್ದ ದೃಶ್ಯ ಸಮಾಜ ಮಾಧ್ಯಮಗಳಲ್ಲಿ ಭಾರೀ ಟೀಕೆಗೊಳಪಟ್ಟಿತು
ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧೀಕ್ಷಕ ಎಂ. ನಾರಾಯಣ, ಚಂದ್ರಶೇಖರ್ ಹುದ್ದಾರ್ ಅವರನ್ನು ತಕ್ಷಣ ಅಮಾನತು ಮಾಡುವ ಆದೇಶ ಹೊರಡಿಸಿದರು
ಈ ಘಟನೆ, ಲಂಚ ವಿರುದ್ಧದ ಹೋರಾಟಕ್ಕೆ ಮತ್ತೊಂದು ಎಚ್ಚರಿಕೆಯ ಸಂಕೇತವಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…