Sports

ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಿಂಕು ಸಿಂಗ್ ಹಾಗೂ ಸಂಸದೆ ಪ್ರಿಯಾ ಸರೋಜ್.

ಭಾರತ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ಪ್ರಿಯಾ ಸರೋಜ್ ಅವರ ತಂದೆ ಹಾಗೂ ಸಮಾಜವಾದಿ ಪಕ್ಷದ ಶಾಸಕ ತೂಫಾನಿ ಸರೋಜ್ ಈ ಸುದ್ದಿಯನ್ನು ಮಾಧ್ಯಮಗಳಿಗೆ ಖಚಿತಪಡಿಸಿದರು.

“ಎರಡೂ ಕುಟುಂಬಗಳು ಈ ಸಂಬಂಧ ಕುರಿತು ಮಾತುಕತೆ ಪೂರ್ಣಗೊಳಿಸಿವೆ. ರಿಂಕು ಸಿಂಗ್ ಅವರ ಪಾಲಕರು ಜ. 16ರಂದು ಅಲಿಗಢದಲ್ಲಿ ನಮ್ಮನ್ನು ಭೇಟಿ ಮಾಡಿ ವಿವರಣೆ ನಡೆಸಿದ್ದಾರೆ. ಆದರೆ ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕಗಳನ್ನು ನಿಗದಿಪಡಿಸುವ ಕಾರ್ಯ ಇನ್ನೂ ಬಾಕಿಯಾಗಿದೆ,” ಎಂದು ಅವರು ಹೇಳಿದರು.

ತೂಫಾನಿ ಸರೋಜ್ ಅವರ ಹೇಳಿಕೆಯ ಪ್ರಕಾರ, ರಿಂಕು ಮತ್ತು ಪ್ರಿಯಾ ಕಳೆದ ಒಂದು ವರ್ಷದಿಂದ ಪರಸ್ಪರ ಪರಿಚಿತರಾಗಿ, ಮೆಚ್ಚಿಕೆ ವ್ಯಕ್ತಪಡಿಸಿದ್ದರು. ಈ ಸಂಬಂಧಕ್ಕೆ ಎರಡೂ ಕುಟುಂಬಗಳ ಹಿರಿಯರ ಒಪ್ಪಿಗೆಯನ್ನು ಪಡೆದು, ಇದೀಗ ಈ ಸಂಬಂಧವನ್ನು ಅಧಿಕೃತಗೊಳಿಸಲಾಗಿದೆ.

ತೂಫಾನಿ ಸರೋಜ್ ಅವರ ಪ್ರಕಾರ, “ಪ್ರಿಯಾ ಅವರ ಸ್ನೇಹಿತೆಯ ತಂದೆಯೂ ಕ್ರಿಕೆಟರ್ ಆಗಿದ್ದರಿಂದ, ಅವರ ಮೂಲಕ ಪ್ರಿಯಾ ಹಾಗೂ ರಿಂಕು ಪರಿಚಯ ಹೊಂದಿದರು. ನಿಶ್ಚಿತಾರ್ಥ ಮತ್ತು ಮದುವೆ ಸಂಬಂಧಿತ ಕಾರ್ಯಕ್ರಮಗಳನ್ನು ಸಂಸತ್ ಅಧಿವೇಶನದ ನಂತರ ಆಯೋಜಿಸಲಾಗುವುದು. ನಿಶ್ಚಿತಾರ್ಥವನ್ನು ಲಖನೌನಲ್ಲಿ ನಡೆಸಲು ನಿರ್ಧರಿಸಲಾಗಿದೆ.”

ಜ. 22ರಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ರಿಂಕು ಸಿಂಗ್ ಆಟವಾಡಲಿದ್ದಾರೆ. ಇದಾದ ಬಳಿಕ ಅವರು ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಕಾರಣದಿಂದ ಮದುವೆ ಕಾರ್ಯಕ್ರಮಗಳು ರಿಂಕು ಅವರ ಕ್ರೀಡಾ ಶಿಡ್ಯೂಲ್‌ ಗೆ ಅಡ್ಡಿಯಾಗದಂತೆ ಪ್ಲಾನ್ ಮಾಡಲಾಗುವುದು ಎಂದು ತೂಫಾನಿ ಸರೋಜ್ ತಿಳಿಸಿದ್ದಾರೆ.

ಪ್ರಿಯಾ ಸರೋಜ್ ವಾರಾಣಸಿಯ ಕಾರ್ಖಿಯೊ ಗ್ರಾಮದ ನಿವಾಸಿಯಾಗಿದ್ದು, 25ನೇ ವಯಸ್ಸಿನಲ್ಲಿ ಜೌನ್ಪುರ ಜಿಲ್ಲೆಯ ಮಚ್ಲಿಶಹರ್ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದ್ದು, ಅಮಿಟಿ ವಿಶ್ವವಿದ್ಯಾಲಯದ ಕಾನೂನು ಪದವೀಧರರಾಗಿದ್ದಾರೆ. ಪ್ರಿಯಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಂದೆಯ ಪರ ಪ್ರಚಾರ ಮಾಡುತ್ತಾ, ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago