Sports

ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಿಂಕು ಸಿಂಗ್ ಹಾಗೂ ಸಂಸದೆ ಪ್ರಿಯಾ ಸರೋಜ್.

ಭಾರತ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ಪ್ರಿಯಾ ಸರೋಜ್ ಅವರ ತಂದೆ ಹಾಗೂ ಸಮಾಜವಾದಿ ಪಕ್ಷದ ಶಾಸಕ ತೂಫಾನಿ ಸರೋಜ್ ಈ ಸುದ್ದಿಯನ್ನು ಮಾಧ್ಯಮಗಳಿಗೆ ಖಚಿತಪಡಿಸಿದರು.

“ಎರಡೂ ಕುಟುಂಬಗಳು ಈ ಸಂಬಂಧ ಕುರಿತು ಮಾತುಕತೆ ಪೂರ್ಣಗೊಳಿಸಿವೆ. ರಿಂಕು ಸಿಂಗ್ ಅವರ ಪಾಲಕರು ಜ. 16ರಂದು ಅಲಿಗಢದಲ್ಲಿ ನಮ್ಮನ್ನು ಭೇಟಿ ಮಾಡಿ ವಿವರಣೆ ನಡೆಸಿದ್ದಾರೆ. ಆದರೆ ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕಗಳನ್ನು ನಿಗದಿಪಡಿಸುವ ಕಾರ್ಯ ಇನ್ನೂ ಬಾಕಿಯಾಗಿದೆ,” ಎಂದು ಅವರು ಹೇಳಿದರು.

ತೂಫಾನಿ ಸರೋಜ್ ಅವರ ಹೇಳಿಕೆಯ ಪ್ರಕಾರ, ರಿಂಕು ಮತ್ತು ಪ್ರಿಯಾ ಕಳೆದ ಒಂದು ವರ್ಷದಿಂದ ಪರಸ್ಪರ ಪರಿಚಿತರಾಗಿ, ಮೆಚ್ಚಿಕೆ ವ್ಯಕ್ತಪಡಿಸಿದ್ದರು. ಈ ಸಂಬಂಧಕ್ಕೆ ಎರಡೂ ಕುಟುಂಬಗಳ ಹಿರಿಯರ ಒಪ್ಪಿಗೆಯನ್ನು ಪಡೆದು, ಇದೀಗ ಈ ಸಂಬಂಧವನ್ನು ಅಧಿಕೃತಗೊಳಿಸಲಾಗಿದೆ.

ತೂಫಾನಿ ಸರೋಜ್ ಅವರ ಪ್ರಕಾರ, “ಪ್ರಿಯಾ ಅವರ ಸ್ನೇಹಿತೆಯ ತಂದೆಯೂ ಕ್ರಿಕೆಟರ್ ಆಗಿದ್ದರಿಂದ, ಅವರ ಮೂಲಕ ಪ್ರಿಯಾ ಹಾಗೂ ರಿಂಕು ಪರಿಚಯ ಹೊಂದಿದರು. ನಿಶ್ಚಿತಾರ್ಥ ಮತ್ತು ಮದುವೆ ಸಂಬಂಧಿತ ಕಾರ್ಯಕ್ರಮಗಳನ್ನು ಸಂಸತ್ ಅಧಿವೇಶನದ ನಂತರ ಆಯೋಜಿಸಲಾಗುವುದು. ನಿಶ್ಚಿತಾರ್ಥವನ್ನು ಲಖನೌನಲ್ಲಿ ನಡೆಸಲು ನಿರ್ಧರಿಸಲಾಗಿದೆ.”

ಜ. 22ರಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ರಿಂಕು ಸಿಂಗ್ ಆಟವಾಡಲಿದ್ದಾರೆ. ಇದಾದ ಬಳಿಕ ಅವರು ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಕಾರಣದಿಂದ ಮದುವೆ ಕಾರ್ಯಕ್ರಮಗಳು ರಿಂಕು ಅವರ ಕ್ರೀಡಾ ಶಿಡ್ಯೂಲ್‌ ಗೆ ಅಡ್ಡಿಯಾಗದಂತೆ ಪ್ಲಾನ್ ಮಾಡಲಾಗುವುದು ಎಂದು ತೂಫಾನಿ ಸರೋಜ್ ತಿಳಿಸಿದ್ದಾರೆ.

ಪ್ರಿಯಾ ಸರೋಜ್ ವಾರಾಣಸಿಯ ಕಾರ್ಖಿಯೊ ಗ್ರಾಮದ ನಿವಾಸಿಯಾಗಿದ್ದು, 25ನೇ ವಯಸ್ಸಿನಲ್ಲಿ ಜೌನ್ಪುರ ಜಿಲ್ಲೆಯ ಮಚ್ಲಿಶಹರ್ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದ್ದು, ಅಮಿಟಿ ವಿಶ್ವವಿದ್ಯಾಲಯದ ಕಾನೂನು ಪದವೀಧರರಾಗಿದ್ದಾರೆ. ಪ್ರಿಯಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಂದೆಯ ಪರ ಪ್ರಚಾರ ಮಾಡುತ್ತಾ, ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago