Latest

ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಗಲಾಟೆ – ಕಾಂಗ್ರೆಸ್ ಮುಖಂಡ ಧನಂಜಯ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ನಗರದ ವಿದ್ಯಾರಣ್ಯಪುರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಧನಂಜಯ್ ಸೇರಿದಂತೆ ಕೆಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರ ಪ್ರಕಾರ, ಧನಂಜಯ್ ನೇತೃತ್ವದಲ್ಲಿ ಬಂದ ಗುಂಪೊಂದು ಶಾಲೆಯ ಆವರಣದಲ್ಲಿ ಧ್ವಂಸ ಕಾರ್ಯ ನಡೆಸಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಲಾಗಿದೆ.

ಧಾಸರಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಧನಂಜಯ್ ಅವರಿಗೆ ಸೇರಿರುವ ಖಾಸಗಿ ಶಾಲೆ ಶಾರದಾ ವಿದ್ಯಾನಿಕೇತನದ ಪಕ್ಕದಲ್ಲಿದೆ. ಆದರೆ, ಈ ಭಾಗದಲ್ಲಿ ಎನ್‌ಪಿಎಸ್ ಶಾಲೆ ಆರಂಭಿಸಲು ಕಾನೂನು ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಶಾಲೆಯ ಆಸ್ತಿಯ  ಕುರಿತು ವಿವಾದ ನಡೆಯುತ್ತಿದ್ದು, ನ್ಯಾಯಾಲಯದಿಂದ ತಡೆಯಾಜ್ಞೆ ಜಾರಿಯಲ್ಲಿದೆ.

ಆದರೂ ಮೇ 2ರಂದು ಧನಂಜಯ್ ಮತ್ತು ಅವರ ಗುಂಪು ಕೋರ್ಟ್ ಆದೇಶವನ್ನು ಲೆಕ್ಕಿಸದೇ ಶಾಲೆಯ ಆವರಣ ಪ್ರವೇಶಿಸಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಈ ವೇಳೆ ಶಾಲೆಯ ಕಿಟಕಿ, ಬಾಗಿಲು, ಸಿಸಿ ಕ್ಯಾಮೆರಾಗಳನ್ನು ನಾಶಮಾಡಲಾಗಿದ್ದು, ಮಕ್ಕಳ ದಾಖಲೆಗಳು ಮತ್ತು ನಗದು ಕಳ್ಳತನವಾಗಿದೆ ಎಂಬ ದೂರು ದಾಖಲಾಗಿದೆ.

ಶಾರದಾ ವಿದ್ಯಾನಿಕೇತನ ಸೊಸೈಟಿಗೆ ಈ ಜಾಗವನ್ನು ಸರ್ಕಾರ ಲೀಸ್‌ನಲ್ಲಿ ನೀಡಿತ್ತು. ಧನಂಜಯ್ ಈ ಸೊಸೈಟಿಯ ಮಾಜಿ ಅಧ್ಯಕ್ಷರಾಗಿದ್ದರು. ಲೀಸ್ ಅವಧಿ 2023ರಲ್ಲೇ ಮುಕ್ತಾಯಗೊಂಡಿದ್ದರೂ, ಶಾಲೆಯ ಆಸ್ತಿಯ ಮೇಲಿನ ಹಕ್ಕು ಪಡೆದರೆಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ ಆವರಣದಲ್ಲಿ ಭದ್ರತಾ ವ್ಯವಸ್ಥೆ ತೀವ್ರಗೊಳಿಸಲಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಲ್ಲಿ ಈ ಘಟನೆ ಭಯವನ್ನುಂಟುಮಾಡಿದೆ.

nazeer ahamad

Recent Posts

ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ

ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…

5 hours ago

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…

5 hours ago

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…

16 hours ago

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

21 hours ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

22 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

1 day ago