Latest

ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಗಲಾಟೆ – ಕಾಂಗ್ರೆಸ್ ಮುಖಂಡ ಧನಂಜಯ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ನಗರದ ವಿದ್ಯಾರಣ್ಯಪುರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಧನಂಜಯ್ ಸೇರಿದಂತೆ ಕೆಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರ ಪ್ರಕಾರ, ಧನಂಜಯ್ ನೇತೃತ್ವದಲ್ಲಿ ಬಂದ ಗುಂಪೊಂದು ಶಾಲೆಯ ಆವರಣದಲ್ಲಿ ಧ್ವಂಸ ಕಾರ್ಯ ನಡೆಸಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಲಾಗಿದೆ.

ಧಾಸರಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಧನಂಜಯ್ ಅವರಿಗೆ ಸೇರಿರುವ ಖಾಸಗಿ ಶಾಲೆ ಶಾರದಾ ವಿದ್ಯಾನಿಕೇತನದ ಪಕ್ಕದಲ್ಲಿದೆ. ಆದರೆ, ಈ ಭಾಗದಲ್ಲಿ ಎನ್‌ಪಿಎಸ್ ಶಾಲೆ ಆರಂಭಿಸಲು ಕಾನೂನು ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಶಾಲೆಯ ಆಸ್ತಿಯ  ಕುರಿತು ವಿವಾದ ನಡೆಯುತ್ತಿದ್ದು, ನ್ಯಾಯಾಲಯದಿಂದ ತಡೆಯಾಜ್ಞೆ ಜಾರಿಯಲ್ಲಿದೆ.

ಆದರೂ ಮೇ 2ರಂದು ಧನಂಜಯ್ ಮತ್ತು ಅವರ ಗುಂಪು ಕೋರ್ಟ್ ಆದೇಶವನ್ನು ಲೆಕ್ಕಿಸದೇ ಶಾಲೆಯ ಆವರಣ ಪ್ರವೇಶಿಸಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಈ ವೇಳೆ ಶಾಲೆಯ ಕಿಟಕಿ, ಬಾಗಿಲು, ಸಿಸಿ ಕ್ಯಾಮೆರಾಗಳನ್ನು ನಾಶಮಾಡಲಾಗಿದ್ದು, ಮಕ್ಕಳ ದಾಖಲೆಗಳು ಮತ್ತು ನಗದು ಕಳ್ಳತನವಾಗಿದೆ ಎಂಬ ದೂರು ದಾಖಲಾಗಿದೆ.

ಶಾರದಾ ವಿದ್ಯಾನಿಕೇತನ ಸೊಸೈಟಿಗೆ ಈ ಜಾಗವನ್ನು ಸರ್ಕಾರ ಲೀಸ್‌ನಲ್ಲಿ ನೀಡಿತ್ತು. ಧನಂಜಯ್ ಈ ಸೊಸೈಟಿಯ ಮಾಜಿ ಅಧ್ಯಕ್ಷರಾಗಿದ್ದರು. ಲೀಸ್ ಅವಧಿ 2023ರಲ್ಲೇ ಮುಕ್ತಾಯಗೊಂಡಿದ್ದರೂ, ಶಾಲೆಯ ಆಸ್ತಿಯ ಮೇಲಿನ ಹಕ್ಕು ಪಡೆದರೆಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ ಆವರಣದಲ್ಲಿ ಭದ್ರತಾ ವ್ಯವಸ್ಥೆ ತೀವ್ರಗೊಳಿಸಲಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಲ್ಲಿ ಈ ಘಟನೆ ಭಯವನ್ನುಂಟುಮಾಡಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

14 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

21 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

21 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago