ಬೆಂಗಳೂರು ನಗರದ ವಿದ್ಯಾರಣ್ಯಪುರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಧನಂಜಯ್ ಸೇರಿದಂತೆ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರ ಪ್ರಕಾರ, ಧನಂಜಯ್ ನೇತೃತ್ವದಲ್ಲಿ ಬಂದ ಗುಂಪೊಂದು ಶಾಲೆಯ ಆವರಣದಲ್ಲಿ ಧ್ವಂಸ ಕಾರ್ಯ ನಡೆಸಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಲಾಗಿದೆ.
ಧಾಸರಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಧನಂಜಯ್ ಅವರಿಗೆ ಸೇರಿರುವ ಖಾಸಗಿ ಶಾಲೆ ಶಾರದಾ ವಿದ್ಯಾನಿಕೇತನದ ಪಕ್ಕದಲ್ಲಿದೆ. ಆದರೆ, ಈ ಭಾಗದಲ್ಲಿ ಎನ್ಪಿಎಸ್ ಶಾಲೆ ಆರಂಭಿಸಲು ಕಾನೂನು ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಶಾಲೆಯ ಆಸ್ತಿಯ ಕುರಿತು ವಿವಾದ ನಡೆಯುತ್ತಿದ್ದು, ನ್ಯಾಯಾಲಯದಿಂದ ತಡೆಯಾಜ್ಞೆ ಜಾರಿಯಲ್ಲಿದೆ.
ಆದರೂ ಮೇ 2ರಂದು ಧನಂಜಯ್ ಮತ್ತು ಅವರ ಗುಂಪು ಕೋರ್ಟ್ ಆದೇಶವನ್ನು ಲೆಕ್ಕಿಸದೇ ಶಾಲೆಯ ಆವರಣ ಪ್ರವೇಶಿಸಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಈ ವೇಳೆ ಶಾಲೆಯ ಕಿಟಕಿ, ಬಾಗಿಲು, ಸಿಸಿ ಕ್ಯಾಮೆರಾಗಳನ್ನು ನಾಶಮಾಡಲಾಗಿದ್ದು, ಮಕ್ಕಳ ದಾಖಲೆಗಳು ಮತ್ತು ನಗದು ಕಳ್ಳತನವಾಗಿದೆ ಎಂಬ ದೂರು ದಾಖಲಾಗಿದೆ.
ಶಾರದಾ ವಿದ್ಯಾನಿಕೇತನ ಸೊಸೈಟಿಗೆ ಈ ಜಾಗವನ್ನು ಸರ್ಕಾರ ಲೀಸ್ನಲ್ಲಿ ನೀಡಿತ್ತು. ಧನಂಜಯ್ ಈ ಸೊಸೈಟಿಯ ಮಾಜಿ ಅಧ್ಯಕ್ಷರಾಗಿದ್ದರು. ಲೀಸ್ ಅವಧಿ 2023ರಲ್ಲೇ ಮುಕ್ತಾಯಗೊಂಡಿದ್ದರೂ, ಶಾಲೆಯ ಆಸ್ತಿಯ ಮೇಲಿನ ಹಕ್ಕು ಪಡೆದರೆಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ ಆವರಣದಲ್ಲಿ ಭದ್ರತಾ ವ್ಯವಸ್ಥೆ ತೀವ್ರಗೊಳಿಸಲಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಲ್ಲಿ ಈ ಘಟನೆ ಭಯವನ್ನುಂಟುಮಾಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…