Crime

ಬೆಂಗಳೂರು ಬೀದಿಗಳಲ್ಲಿ ಪುಂಡರ ಅಟ್ಟಹಾಸ: ಮಹಿಳೆ ಮತ್ತು ಮಗುವಿದ್ದ ಕಾರಿನ ಮೇಲೆ ದಾಳಿ ಮಾಡಿದವರು ಪೊಲೀಸರ ವಶಕ್ಕೆ.

ಬೆಂಗಳೂರು ನಗರದಲ್ಲಿ ಬೀದಿ ಜಗಳಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಶೆಗೂಡಿದವರ ಅನಾಚಾರ ಸಾರ್ವಜನಿಕರಿಗೆ ತೊಂದರೆ ಉಂಟಿಸುತ್ತಿದೆ. ಈ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಹಲವಾರು ಪುಡಿ ರೌಡಿಗಳನ್ನು ಬಂಧಿಸಿ ಕ್ರಮ ಕೈಗೊಂಡಿದೆ. ಇತ್ತೀಚಿಗೆ, ಮತ್ತೊಬ್ಬ ಬೀದಿ ಜಗಳಕೋರನಿಗೂ ಪೊಲೀಸರ ಅತಿಥಿಯಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಟಿಸಿ ಪಾಳ್ಯದಲ್ಲಿ ನಡೆದ ಘಟನೆ

ಮಾರ್ಚ್ 9ರಂದು ನಗರದ ಟಿಸಿ ಪಾಳ್ಯದಲ್ಲಿ ಅಹಿತಕರ ಘಟನೆ ನಡೆದಿದೆ. ಇಬ್ಬರು ಯುವಕರು ಮೊಪೆಡ್‌ನಲ್ಲಿ ಬಂದು, ರಸ್ತೆ ಮಧ್ಯೆ ಕಾರನ್ನು ತಡೆದು, ಮಹಿಳೆ ಮತ್ತು ಮಗು ಇದ್ದರೂ ಸಹ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದಾರೆ. ಆಕ್ರೋಶದಿಂದ, ಕಾರಿನ ಬಲಭಾಗದ ಮಿರರ್ ಮುರಿದು ಪರಾರಿಯಾದರು.

ಘಟನೆಯ ವಿಡಿಯೊ ವೈರಲ್, ಪೊಲೀಸರು ಕ್ರಮ

ಈ ಗೂಂಡಾ ವರ್ತನೆಯನ್ನೂ ಜನರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ವಿಶೇಷವಾಗಿ, ಆರೋಪಿಗಳೇ ತಮ್ಮ ಕೃತ್ಯವನ್ನು ಗರ್ವದಿಂದ ವಿಡಿಯೊ ಮಾಡುತ್ತಿದ್ದು, “ವಿಡಿಯೊ ಮಾಡ್ಕೊಂಡ್ ಏನೋ ಮಾಡ್ತೀಯಾ?” ಎಂದು ಬೆದರಿಕೆ ಹಾಕಿದ್ದರು. ಆದರೆ, ಅವರ ಈ ವಿಡಿಯೊವೇ ಅವರ ವಿರುದ್ಧ ಸಾಕ್ಷಿಯಾಗಿ ಪರಿಣಮಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕರು ಪೊಲೀಸರ ಗಮನಕ್ಕೆ ತರಿದರು. ನಂತರ, ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದರು. ನಗರದ ಹೆಚ್ಚುತ್ತಿರುವ ರೌಡಿ ಸಂಸ್ಕೃತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

4 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

4 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

4 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

19 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

19 hours ago