Crime

ಬೆಂಗಳೂರು ಬೀದಿಗಳಲ್ಲಿ ಪುಂಡರ ಅಟ್ಟಹಾಸ: ಮಹಿಳೆ ಮತ್ತು ಮಗುವಿದ್ದ ಕಾರಿನ ಮೇಲೆ ದಾಳಿ ಮಾಡಿದವರು ಪೊಲೀಸರ ವಶಕ್ಕೆ.

ಬೆಂಗಳೂರು ನಗರದಲ್ಲಿ ಬೀದಿ ಜಗಳಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಶೆಗೂಡಿದವರ ಅನಾಚಾರ ಸಾರ್ವಜನಿಕರಿಗೆ ತೊಂದರೆ ಉಂಟಿಸುತ್ತಿದೆ. ಈ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಹಲವಾರು ಪುಡಿ ರೌಡಿಗಳನ್ನು ಬಂಧಿಸಿ ಕ್ರಮ ಕೈಗೊಂಡಿದೆ. ಇತ್ತೀಚಿಗೆ, ಮತ್ತೊಬ್ಬ ಬೀದಿ ಜಗಳಕೋರನಿಗೂ ಪೊಲೀಸರ ಅತಿಥಿಯಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಟಿಸಿ ಪಾಳ್ಯದಲ್ಲಿ ನಡೆದ ಘಟನೆ

ಮಾರ್ಚ್ 9ರಂದು ನಗರದ ಟಿಸಿ ಪಾಳ್ಯದಲ್ಲಿ ಅಹಿತಕರ ಘಟನೆ ನಡೆದಿದೆ. ಇಬ್ಬರು ಯುವಕರು ಮೊಪೆಡ್‌ನಲ್ಲಿ ಬಂದು, ರಸ್ತೆ ಮಧ್ಯೆ ಕಾರನ್ನು ತಡೆದು, ಮಹಿಳೆ ಮತ್ತು ಮಗು ಇದ್ದರೂ ಸಹ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದಾರೆ. ಆಕ್ರೋಶದಿಂದ, ಕಾರಿನ ಬಲಭಾಗದ ಮಿರರ್ ಮುರಿದು ಪರಾರಿಯಾದರು.

ಘಟನೆಯ ವಿಡಿಯೊ ವೈರಲ್, ಪೊಲೀಸರು ಕ್ರಮ

ಈ ಗೂಂಡಾ ವರ್ತನೆಯನ್ನೂ ಜನರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ವಿಶೇಷವಾಗಿ, ಆರೋಪಿಗಳೇ ತಮ್ಮ ಕೃತ್ಯವನ್ನು ಗರ್ವದಿಂದ ವಿಡಿಯೊ ಮಾಡುತ್ತಿದ್ದು, “ವಿಡಿಯೊ ಮಾಡ್ಕೊಂಡ್ ಏನೋ ಮಾಡ್ತೀಯಾ?” ಎಂದು ಬೆದರಿಕೆ ಹಾಕಿದ್ದರು. ಆದರೆ, ಅವರ ಈ ವಿಡಿಯೊವೇ ಅವರ ವಿರುದ್ಧ ಸಾಕ್ಷಿಯಾಗಿ ಪರಿಣಮಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕರು ಪೊಲೀಸರ ಗಮನಕ್ಕೆ ತರಿದರು. ನಂತರ, ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದರು. ನಗರದ ಹೆಚ್ಚುತ್ತಿರುವ ರೌಡಿ ಸಂಸ್ಕೃತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago