Latest

ರಿಷಿಕೇಶ ದುರಂತ: ರಿವರ್‌ ರಾಫ್ಟಿಂಗ್ ವೇಳೆ ನೀರಿಗೆ ಬಿದ್ದು ಯುವಕನ ಸಾವು

ಉತ್ತರಾಖಂಡದ ಪ್ರಸಿದ್ಧ ಪ್ರವಾಸಿ ತಾಣ ರಿಷಿಕೇಶದಲ್ಲಿ ನಡೆಯುತ್ತಿದ್ದ ರಿವರ್‌ ರಾಫ್ಟಿಂಗ್‌ನಾಗಮನ ಒಂದು ದುರಂತದಲ್ಲಿ ಅಂತ್ಯ ಕಂಡಿದೆ. ಡೆಹ್ರಾಡೂನ್‌ನಿಂದ ಪ್ರವಾಸಕ್ಕೆ ಬಂದಿದ್ದ ಸಾಗರ್‌ ನೇಗಿ ಎಂಬ ಯುವಕ, ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಘಟನೆ ರಿಷಿಕೇಶದ ಶಿವಪುರಿ ಬಳಿ ನಡೆದಿದೆ. ಗಂಗಾ ನದಿಯಲ್ಲಿ ರಿವರ್‌ ರಾಫ್ಟಿಂಗ್ ನಡೆಸುತ್ತಿದ್ದ ವೇಳೆ, ದೋಣಿಯಲ್ಲಿ ಸಾಗುತ್ತಿದ್ದ ಸಾಗರ್‌ ನೇಗಿ ಮಾರ್ಗಮಧ್ಯೆ ಆಯತಪ್ಪಿ ನೀರಿಗೆ ಜರಿದಿದ್ದಾರೆ. ಆ ಕ್ಷಣದಲ್ಲಿ ನದಿಯಲ್ಲಿ ನೀರಿನ ಪ್ರವಾಹವೂ ತೀವ್ರವಾಗಿದ್ದು, ಅವರು ಮತ್ತೆ ದೋಣಿಗೆ ಹತ್ತಲು ಸಾಧ್ಯವಾಗಲಿಲ್ಲ. ಜೊತೆಗೆ ಇದ್ದ ತಂಡದವರು ಸಹ ಯತ್ನಿಸಿದರೂ, ಆತನನ್ನು ರಕ್ಷಿಸಲು ವಿಫಲರಾದರು.

ಸಾಗರ್‌ ನೇಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ದೃಶ್ಯಗಳು ಈಗ  ಹರಿದಾಡುತ್ತಿವೆ. ಘಟನೆಯಾದ ಕೆಲವು ಗಂಟೆಗಳ ಬಳಿಕ ರಕ್ಷಣಾ ಸಿಬ್ಬಂದಿ ಅವರ ಶವವನ್ನು ಗಂಗಾ ನದಿಯಿಂದ ಪತ್ತೆ ಹಚ್ಚಿದ್ದಾರೆ.

ಘಟನೆಯ ನಂತರ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತಪೋವನ್‌ ಹೊರಠಾಣೆಯ ಉಸ್ತುವಾರಿ ಪ್ರದೀಪ್‌ ರಾವತ್‌ ಅವರು ಮಾತನಾಡಿ, ಪ್ರಕರಣದ ಸಂಬಂಧ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದರು.

ಈ ಘಟನೆ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ರಿವರ್‌ ರಾಫ್ಟಿಂಗ್ ವೇಳೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago