ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ ಶಿವರಾಜ್.ಮಲ್ಲಪ್ಪ. ನಾಯ್ಕೊಡಿ 31 ಸಾವಿಗೀಡಾಗಿದ್ದಾನೆ.
ಭಾನುವಾರ ಬೆಳಿಗ್ಗೆ 7ಗಂಟೆಗೆ ಶಿವರಾಜನು ಡಂಬಳ ಗ್ರಾಮದ ಗೊಲ್ಲಳಪ್ಪನ ಮಾಲೀಕತ್ವದ KA29A2973 ಆಟೋದಲ್ಲಿ ಸಿಂದಗಿ ಸಂತೆಯಲ್ಲಿ ಕುರಿಮರಿಕೊಂಡು ಮರಳಿ ಊರಿಗೆ ಬರುತ್ತಿರುವಾಗ ಗೊಲಗೇರಿ ಕಡೆಯಿಂದ ಯಾದಗಿರಿ ಡಿಪುವಿನ KA 33F0604 ಯಾದಗಿರಿ to ಸಾತರಾ ಬಸ್ಸು ಮತ್ತು ಆಟೋದ ಮಧ್ಯ ಭೀಕರ ಅಪಘಾತ ನಡೆದಿದೆ.
ಅಪಘಾತದಲ್ಲಿ ಇನ್ನುಳಿದ 4 ಜನ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ ಈ ಕುರಿತು ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕೆಲವು ತಿಂಗಳ ಹಿಂದೆ ಯಂಕಂಚಿ ಗ್ರಾಮದ ಹತ್ತಿರ ಇಂತಹದೇ ಅಪಘಾತ ಪ್ರಕರಣ ನಡೆದೆತ್ತು ಆ ಸಮಯದಲ್ಲಿ ಕೂಡ ಗೋಲಗೇರಿ ಗ್ರಾಮದ ಒಬ್ಬ ಯುವಕ ಸಾವಿಗೀಡಾಗಿದದ್ದು . ಸಿಂದಗಿಯಿಂದ ಶಹಾಪುರ ಹೋಗುವ ರಾಜ್ಯ ಹೆದ್ದಾರಿ ಮನ್ನಾಪುರ ಗ್ರಾಮ ದಿಂದ ಗೊಲಗೇರಿ ಸುಮಾರು 14 ಕಿಲೋಮೀಟರ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹಾಳಾಗಿದ್ದು ಇನ್ನಾದರು PWD ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ರಸ್ತೆ ಸುಧಾರಿಸಿ ಇನ್ನಷ್ಟು ಅಪಘಾತಗಳನ್ನು ಆಗದಂತೆ ನೋಡಿಕೊಳ್ಳಬೇಕು
ವರದಿ: ದಾವಲಸಾಬ್ ಬನ್ನಟ್ಟಿ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…