ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ ಶಿವರಾಜ್.ಮಲ್ಲಪ್ಪ. ನಾಯ್ಕೊಡಿ 31 ಸಾವಿಗೀಡಾಗಿದ್ದಾನೆ.
ಭಾನುವಾರ ಬೆಳಿಗ್ಗೆ 7ಗಂಟೆಗೆ ಶಿವರಾಜನು ಡಂಬಳ ಗ್ರಾಮದ ಗೊಲ್ಲಳಪ್ಪನ ಮಾಲೀಕತ್ವದ KA29A2973 ಆಟೋದಲ್ಲಿ ಸಿಂದಗಿ ಸಂತೆಯಲ್ಲಿ ಕುರಿಮರಿಕೊಂಡು ಮರಳಿ ಊರಿಗೆ ಬರುತ್ತಿರುವಾಗ ಗೊಲಗೇರಿ ಕಡೆಯಿಂದ ಯಾದಗಿರಿ ಡಿಪುವಿನ KA 33F0604 ಯಾದಗಿರಿ to ಸಾತರಾ ಬಸ್ಸು ಮತ್ತು ಆಟೋದ ಮಧ್ಯ ಭೀಕರ ಅಪಘಾತ ನಡೆದಿದೆ.
ಅಪಘಾತದಲ್ಲಿ ಇನ್ನುಳಿದ 4 ಜನ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ ಈ ಕುರಿತು ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕೆಲವು ತಿಂಗಳ ಹಿಂದೆ ಯಂಕಂಚಿ ಗ್ರಾಮದ ಹತ್ತಿರ ಇಂತಹದೇ ಅಪಘಾತ ಪ್ರಕರಣ ನಡೆದೆತ್ತು ಆ ಸಮಯದಲ್ಲಿ ಕೂಡ ಗೋಲಗೇರಿ ಗ್ರಾಮದ ಒಬ್ಬ ಯುವಕ ಸಾವಿಗೀಡಾಗಿದದ್ದು . ಸಿಂದಗಿಯಿಂದ ಶಹಾಪುರ ಹೋಗುವ ರಾಜ್ಯ ಹೆದ್ದಾರಿ ಮನ್ನಾಪುರ ಗ್ರಾಮ ದಿಂದ ಗೊಲಗೇರಿ ಸುಮಾರು 14 ಕಿಲೋಮೀಟರ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹಾಳಾಗಿದ್ದು ಇನ್ನಾದರು PWD ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ರಸ್ತೆ ಸುಧಾರಿಸಿ ಇನ್ನಷ್ಟು ಅಪಘಾತಗಳನ್ನು ಆಗದಂತೆ ನೋಡಿಕೊಳ್ಳಬೇಕು
ವರದಿ: ದಾವಲಸಾಬ್ ಬನ್ನಟ್ಟಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…