ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ ಶಿವರಾಜ್.ಮಲ್ಲಪ್ಪ. ನಾಯ್ಕೊಡಿ 31 ಸಾವಿಗೀಡಾಗಿದ್ದಾನೆ.
ಭಾನುವಾರ ಬೆಳಿಗ್ಗೆ 7ಗಂಟೆಗೆ ಶಿವರಾಜನು ಡಂಬಳ ಗ್ರಾಮದ ಗೊಲ್ಲಳಪ್ಪನ ಮಾಲೀಕತ್ವದ KA29A2973 ಆಟೋದಲ್ಲಿ ಸಿಂದಗಿ ಸಂತೆಯಲ್ಲಿ ಕುರಿಮರಿಕೊಂಡು ಮರಳಿ ಊರಿಗೆ ಬರುತ್ತಿರುವಾಗ ಗೊಲಗೇರಿ ಕಡೆಯಿಂದ ಯಾದಗಿರಿ ಡಿಪುವಿನ KA 33F0604 ಯಾದಗಿರಿ to ಸಾತರಾ ಬಸ್ಸು ಮತ್ತು ಆಟೋದ ಮಧ್ಯ ಭೀಕರ ಅಪಘಾತ ನಡೆದಿದೆ.
ಅಪಘಾತದಲ್ಲಿ ಇನ್ನುಳಿದ 4 ಜನ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ ಈ ಕುರಿತು ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕೆಲವು ತಿಂಗಳ ಹಿಂದೆ ಯಂಕಂಚಿ ಗ್ರಾಮದ ಹತ್ತಿರ ಇಂತಹದೇ ಅಪಘಾತ ಪ್ರಕರಣ ನಡೆದೆತ್ತು ಆ ಸಮಯದಲ್ಲಿ ಕೂಡ ಗೋಲಗೇರಿ ಗ್ರಾಮದ ಒಬ್ಬ ಯುವಕ ಸಾವಿಗೀಡಾಗಿದದ್ದು . ಸಿಂದಗಿಯಿಂದ ಶಹಾಪುರ ಹೋಗುವ ರಾಜ್ಯ ಹೆದ್ದಾರಿ ಮನ್ನಾಪುರ ಗ್ರಾಮ ದಿಂದ ಗೊಲಗೇರಿ ಸುಮಾರು 14 ಕಿಲೋಮೀಟರ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹಾಳಾಗಿದ್ದು ಇನ್ನಾದರು PWD ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ರಸ್ತೆ ಸುಧಾರಿಸಿ ಇನ್ನಷ್ಟು ಅಪಘಾತಗಳನ್ನು ಆಗದಂತೆ ನೋಡಿಕೊಳ್ಳಬೇಕು
ವರದಿ: ದಾವಲಸಾಬ್ ಬನ್ನಟ್ಟಿ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…