ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಲಗಿ–ಅಡಹಳಟ್ಟಿ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು, ತೆಗ್ಗು-ಗುಂಡಿಗಳಿಂದ ತುಂಬಿಕೊಂಡಿದೆ. ರಸ್ತೆಯ ದುಸ್ಥಿತಿಯಿಂದ ಬೈಕ್ ಸವಾರರು ಮತ್ತು ವಾಹನ ಚಾಲಕರು ಸಂಚರಿಸಲು ಭಾರೀ ಕಷ್ಟ ಅನುಭವಿಸುತ್ತಿದ್ದಾರೆ.
ಚುನಾವಣೆ ವೇಳೆ ಅಭಿವೃದ್ಧಿಯ ಭರವಸೆ ನೀಡುವ ರಾಜಕಾರಣಿಗಳು, ಬಳಿಕ ಈ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆಕ್ರೋಶವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಪ್ಯಾಚ್ ವರ್ಕ್ ಸಹ ಮಾಡದೇ ರಸ್ತೆಯನ್ನು ಬಿಟ್ಟುಬಿಟ್ಟಿರುವುದರಿಂದ, ಪ್ರತಿದಿನ ಪ್ರಯಾಣಿಸುವವರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.
ಅಥಣಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಇದೇ ರೀತಿಯ ರಸ್ತೆ ಸಮಸ್ಯೆ ಕಂಡುಬರುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…