ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್ನಲ್ಲಿ ರಸ್ತೆ ಸಂಪೂರ್ಣ ಕುಸಿದು ಹೋಗಿರುವ ಘಟನೆ ನಡೆದಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಅವಾಂತರಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೇವಲ ಎರಡು ತಿಂಗಳ ಹಿಂದಷ್ಟೇ ಇಲ್ಲಿ ತಡೆಗೋಡೆ ನಿರ್ಮಿಸಿ ರಸ್ತೆ ಮೇಲೆ ಮಣ್ಣು ಹಾಕಿ ಕಾಮಗಾರಿ ನಡೆಸಲಾಗಿತ್ತು. ಆದರೆ, ಕಳಪೆ ಮಟ್ಟದ ಕಾಮಗಾರಿ ಮತ್ತು ನೀರು ಹರಿಯುವ ವ್ಯವಸ್ಥೆಯ ಕೊರತೆಯಿಂದ ಮಳೆಯ ನೀರಿನ ಒತ್ತಡ ತಡೆಯಲಾಗದೇ ರಸ್ತೆ ಕೊಚ್ಚಿ ಹೋಗಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಕುಸಿತದ ಪರಿಣಾಮವಾಗಿ ಅಲ್ಲಿದ್ದ ಒಮಿನಿ ಕಾರೊಂದು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಹಲವಾರು ಮನೆಗಳ ಸಂಪರ್ಕ ಕಡಿತಗೊಂಡಿದೆ. ನಿವಾಸಿಗಳು ಮನೆಯಿಂದ ಹೊರಬರಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೊಂದೆಡೆ, ನಿರ್ಮಿಸಿರುವ ತಡೆಗೋಡೆ ಕೂಡ ಕುಸಿಯುವ ಭೀತಿ ಎದುರಾಗಿದ್ದು, ಪಕ್ಕದ ಮನೆಗಳ ಸುರಕ್ಷತೆ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹೈದರಾಬಾದ್ನ ಚಾದರ್ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…
ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್ಗಳನ್ನು ಹುಕ್ಕೇರಿ…
ದೆಹಲಿ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…
ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…
ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…