Categories: CorruptionLatest

ಭಾರಿ ಮಳೆಗೆ ರಸ್ತೆ ಕೊಚ್ಚಿ ಹೋಯ್ತು; ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್‌ನಲ್ಲಿ ರಸ್ತೆ ಸಂಪೂರ್ಣ ಕುಸಿದು ಹೋಗಿರುವ ಘಟನೆ ನಡೆದಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಅವಾಂತರಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೇವಲ ಎರಡು ತಿಂಗಳ ಹಿಂದಷ್ಟೇ ಇಲ್ಲಿ ತಡೆಗೋಡೆ ನಿರ್ಮಿಸಿ ರಸ್ತೆ ಮೇಲೆ ಮಣ್ಣು ಹಾಕಿ ಕಾಮಗಾರಿ ನಡೆಸಲಾಗಿತ್ತು. ಆದರೆ, ಕಳಪೆ ಮಟ್ಟದ ಕಾಮಗಾರಿ ಮತ್ತು ನೀರು ಹರಿಯುವ ವ್ಯವಸ್ಥೆಯ ಕೊರತೆಯಿಂದ ಮಳೆಯ ನೀರಿನ ಒತ್ತಡ ತಡೆಯಲಾಗದೇ ರಸ್ತೆ ಕೊಚ್ಚಿ ಹೋಗಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಕುಸಿತದ ಪರಿಣಾಮವಾಗಿ ಅಲ್ಲಿದ್ದ ಒಮಿನಿ ಕಾರೊಂದು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಹಲವಾರು ಮನೆಗಳ ಸಂಪರ್ಕ ಕಡಿತಗೊಂಡಿದೆ. ನಿವಾಸಿಗಳು ಮನೆಯಿಂದ ಹೊರಬರಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೊಂದೆಡೆ, ನಿರ್ಮಿಸಿರುವ ತಡೆಗೋಡೆ ಕೂಡ ಕುಸಿಯುವ ಭೀತಿ ಎದುರಾಗಿದ್ದು, ಪಕ್ಕದ ಮನೆಗಳ ಸುರಕ್ಷತೆ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ…

55 minutes ago

ಕ್ರಿಕೆಟ್‌ನ ಕರಾಳ ಮುಖ ಬಯಲು? ಆಯ್ಕೆಗೆ ಲೈಂಗಿಕ ಆಮಿಷ, ದುಬಾರಿ ಗಿಫ್ಟ್ ಆರೋಪ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್‌ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ…

10 hours ago

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

1 day ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

1 day ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

2 days ago

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

2 days ago