Latest

ಸಿರಿಗೆರೆ ಬಳಿ ದರೋಡೆ ಯತ್ನ ವಿಫಲ: ಮಾರಕಾಸ್ತ್ರಗಳೊಂದಿಗೆ ಮೂವರು ಬಂಧನ

ಚಿತ್ರದುರ್ಗ: ಹೊಸಕೆರೆ ಸಮೀಪದ ಹಳ್ಳದ ಬಳಿ ಕಾರಿನಲ್ಲಿ ಕುಳಿತು ದರೋಡೆ ಯತ್ನಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಶಂಕಿತ ತಂಡವೊಂದನ್ನು ಸಿರಿಗೆರೆ ಪೊಲೀಸರು ಮಂಗಳವಾರ ಸಂಜೆ ವಶಕ್ಕೆ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ.

ಗ್ರಾಮಸ್ಥರಿಂದ ದೊರಕಿದ ಖಚಿತ ಮಾಹಿತಿಯ ಮೇಲೆ ಕ್ರಮ ಕೈಗೊಂಡ ಪೊಲೀಸರು, ಶಂಕಿತರು ದರೋಡೆಗೆ ಬಳಸುತ್ತಿದ್ದ ಕಾರು ಹಾಗೂ ಅದರೊಳಗೆ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕಾರಿನಲ್ಲಿ ಕಾರದ ಪುಡಿಯೂ ಪತ್ತೆಯಾಗಿದೆ.

ಬಂಧಿತರು ಐವರಿದ್ದ ತಂಡದ ಸದಸ್ಯರಾಗಿದ್ದು, ಅವರಲ್ಲಿ ಮೂವರು ಪೊಲೀಸರ ಕೈಗೆ ಬಿದ್ದರೆ, ಇನ್ನು ಇಬ್ಬರು ದೌಡಾಯಿಸಿದ್ದಾರೆ. ಪೊಲೀಸರು ಇವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ತಂಡವು ಸುತ್ತಮುತ್ತಲಿನ ಪ್ರದೇಶದ ಪ್ರಮುಖ ಅಡಿಕೆ ವ್ಯಾಪಾರಿಯೊಬ್ಬರು ನಗದು ಹಣವನ್ನು ಸಾಗಿಸುತ್ತಿರುವ ಮಾಹಿತಿ ಹೊಂದಿದ್ದಾಗಿ ತಿಳಿದು ಬಂದಿದೆ. ಈ ನಗದನ್ನು ದರೋಡೆಗೊಳಿಸುವ ಉದ್ದೇಶದಿಂದವೇ ಆರೋಪಿಗಳು ಕಾರ್ಯಚರಣೆ ರೂಪಿಸಿದ್ದರು ಎನ್ನಲಾಗಿದೆ.

ಚೌಕಸತೆಯಿಂದ ಪ್ಲ್ಯಾನ್ ರೂಪಿಸಿದ್ದ ಆರೋಪಿಗಳು, ತಮ್ಮ ಕಾರಿನ ಮುಂಭಾಗದ ನಂಬರ್ ಪ್ಲೇಟಿಗೆ ಕೆಸರು ಮೆತ್ತಿದ್ದರೆ, ಹಿಂಭಾಗದ ನಂಬರ್‌ ಪ್ಲೇಟಿಗೆ ಸ್ಟಿಕರ್‌ ಅಂಟಿಸಿ ಗುರುತಿಸದಂತೆ ಜಾಗ್ರತೆಯಿಂದ ಕಾರ್ಯಾಚರಣೆ ನಡೆಸಿದ್ದರು.

ಘಟನೆಯ ನಂತರ ಸಿರಿಗೆರೆ ಠಾಣೆಗೆ ಭೇಟಿ ನೀಡಿದ ಚಿತ್ರದುರ್ಗ ಡಿವೈಎಸ್‌ಪಿ ದಿನಕರ್, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಚುರುಕು ಕ್ರಮ ಕೈಗೊಳ್ಳಲಾಗಿದೆ.

nazeer ahamad

Recent Posts

ದರ್ಭಂಗಾದಲ್ಲಿ ಯುವತಿ ಅಪಹರಣ: ಕ್ರಮಕೈಗೊಳ್ಳದೆ ನಿರ್ಲಕ್ಷಿಸಿದ ಪೊಲೀಸರ ವಿರುದ್ಧ ಆಕ್ರೋಶ

ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ದಿನದ ಬೆಳಗಿನ ಜಾವ ನಡೆದ ಯುವತಿಯ ಅಪಹರಣ ಪ್ರಕರಣ ಇದೀಗ ಪೊಲೀಸರ ನಿರ್ಲಕ್ಷ್ಯ ಆರೋಪದಿಂದ ಚರ್ಚೆಗೆ…

9 minutes ago

ಮಂಗಳೂರು: ನೇತ್ರಾವತಿ ನದಿಯಿಂದ ಮರಳು ಕಳ್ಳ ಸಾಗಾಟ – ಪಿಕಪ್ ಹಾಗೂ ಸ್ಕೂಟರ್ ವಶಕ್ಕೆ

ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…

13 hours ago

ಭಟ್ಕಳ ಸಮುದ್ರ ದುರಂತ: ದೋಣಿ ಮುಗುಚಿ ನಾಲ್ವರು ಮೀನುಗಾರರು ನಾಪತ್ತೆ, ಇಬ್ಬರು ರಕ್ಷಣೆ

ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…

13 hours ago

ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿ ಮೇಲೆ ಪ್ರಿಯಕರನಿಂದ ಹಲ್ಲೆ!

ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…

13 hours ago

ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನ ವಿಡಿಯೋ ಕಾಲ್! ಶಿಕ್ಷಕಿ ವಿರುದ್ ಪೋಕ್ಸೋ

ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…

14 hours ago

ಮಾಕನೂರಿನಲ್ಲಿ ಜೂಜಾಟ ದಾಳಿ: ₹1.74 ಲಕ್ಷ ನಗದು ವಶ, 18 ಮಂದಿ ವಿರುದ್ಧ ಕೇಸ್

ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್‌ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ…

14 hours ago