Latest

ಸಿರಿಗೆರೆ ಬಳಿ ದರೋಡೆ ಯತ್ನ ವಿಫಲ: ಮಾರಕಾಸ್ತ್ರಗಳೊಂದಿಗೆ ಮೂವರು ಬಂಧನ

ಚಿತ್ರದುರ್ಗ: ಹೊಸಕೆರೆ ಸಮೀಪದ ಹಳ್ಳದ ಬಳಿ ಕಾರಿನಲ್ಲಿ ಕುಳಿತು ದರೋಡೆ ಯತ್ನಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಶಂಕಿತ ತಂಡವೊಂದನ್ನು ಸಿರಿಗೆರೆ ಪೊಲೀಸರು ಮಂಗಳವಾರ ಸಂಜೆ ವಶಕ್ಕೆ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ.

ಗ್ರಾಮಸ್ಥರಿಂದ ದೊರಕಿದ ಖಚಿತ ಮಾಹಿತಿಯ ಮೇಲೆ ಕ್ರಮ ಕೈಗೊಂಡ ಪೊಲೀಸರು, ಶಂಕಿತರು ದರೋಡೆಗೆ ಬಳಸುತ್ತಿದ್ದ ಕಾರು ಹಾಗೂ ಅದರೊಳಗೆ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕಾರಿನಲ್ಲಿ ಕಾರದ ಪುಡಿಯೂ ಪತ್ತೆಯಾಗಿದೆ.

ಬಂಧಿತರು ಐವರಿದ್ದ ತಂಡದ ಸದಸ್ಯರಾಗಿದ್ದು, ಅವರಲ್ಲಿ ಮೂವರು ಪೊಲೀಸರ ಕೈಗೆ ಬಿದ್ದರೆ, ಇನ್ನು ಇಬ್ಬರು ದೌಡಾಯಿಸಿದ್ದಾರೆ. ಪೊಲೀಸರು ಇವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ತಂಡವು ಸುತ್ತಮುತ್ತಲಿನ ಪ್ರದೇಶದ ಪ್ರಮುಖ ಅಡಿಕೆ ವ್ಯಾಪಾರಿಯೊಬ್ಬರು ನಗದು ಹಣವನ್ನು ಸಾಗಿಸುತ್ತಿರುವ ಮಾಹಿತಿ ಹೊಂದಿದ್ದಾಗಿ ತಿಳಿದು ಬಂದಿದೆ. ಈ ನಗದನ್ನು ದರೋಡೆಗೊಳಿಸುವ ಉದ್ದೇಶದಿಂದವೇ ಆರೋಪಿಗಳು ಕಾರ್ಯಚರಣೆ ರೂಪಿಸಿದ್ದರು ಎನ್ನಲಾಗಿದೆ.

ಚೌಕಸತೆಯಿಂದ ಪ್ಲ್ಯಾನ್ ರೂಪಿಸಿದ್ದ ಆರೋಪಿಗಳು, ತಮ್ಮ ಕಾರಿನ ಮುಂಭಾಗದ ನಂಬರ್ ಪ್ಲೇಟಿಗೆ ಕೆಸರು ಮೆತ್ತಿದ್ದರೆ, ಹಿಂಭಾಗದ ನಂಬರ್‌ ಪ್ಲೇಟಿಗೆ ಸ್ಟಿಕರ್‌ ಅಂಟಿಸಿ ಗುರುತಿಸದಂತೆ ಜಾಗ್ರತೆಯಿಂದ ಕಾರ್ಯಾಚರಣೆ ನಡೆಸಿದ್ದರು.

ಘಟನೆಯ ನಂತರ ಸಿರಿಗೆರೆ ಠಾಣೆಗೆ ಭೇಟಿ ನೀಡಿದ ಚಿತ್ರದುರ್ಗ ಡಿವೈಎಸ್‌ಪಿ ದಿನಕರ್, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಚುರುಕು ಕ್ರಮ ಕೈಗೊಳ್ಳಲಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

15 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

22 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

22 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago