ಚಿತ್ರದುರ್ಗ: ಹೊಸಕೆರೆ ಸಮೀಪದ ಹಳ್ಳದ ಬಳಿ ಕಾರಿನಲ್ಲಿ ಕುಳಿತು ದರೋಡೆ ಯತ್ನಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಶಂಕಿತ ತಂಡವೊಂದನ್ನು ಸಿರಿಗೆರೆ ಪೊಲೀಸರು ಮಂಗಳವಾರ ಸಂಜೆ ವಶಕ್ಕೆ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ.
ಗ್ರಾಮಸ್ಥರಿಂದ ದೊರಕಿದ ಖಚಿತ ಮಾಹಿತಿಯ ಮೇಲೆ ಕ್ರಮ ಕೈಗೊಂಡ ಪೊಲೀಸರು, ಶಂಕಿತರು ದರೋಡೆಗೆ ಬಳಸುತ್ತಿದ್ದ ಕಾರು ಹಾಗೂ ಅದರೊಳಗೆ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕಾರಿನಲ್ಲಿ ಕಾರದ ಪುಡಿಯೂ ಪತ್ತೆಯಾಗಿದೆ.
ಬಂಧಿತರು ಐವರಿದ್ದ ತಂಡದ ಸದಸ್ಯರಾಗಿದ್ದು, ಅವರಲ್ಲಿ ಮೂವರು ಪೊಲೀಸರ ಕೈಗೆ ಬಿದ್ದರೆ, ಇನ್ನು ಇಬ್ಬರು ದೌಡಾಯಿಸಿದ್ದಾರೆ. ಪೊಲೀಸರು ಇವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ತಂಡವು ಸುತ್ತಮುತ್ತಲಿನ ಪ್ರದೇಶದ ಪ್ರಮುಖ ಅಡಿಕೆ ವ್ಯಾಪಾರಿಯೊಬ್ಬರು ನಗದು ಹಣವನ್ನು ಸಾಗಿಸುತ್ತಿರುವ ಮಾಹಿತಿ ಹೊಂದಿದ್ದಾಗಿ ತಿಳಿದು ಬಂದಿದೆ. ಈ ನಗದನ್ನು ದರೋಡೆಗೊಳಿಸುವ ಉದ್ದೇಶದಿಂದವೇ ಆರೋಪಿಗಳು ಕಾರ್ಯಚರಣೆ ರೂಪಿಸಿದ್ದರು ಎನ್ನಲಾಗಿದೆ.
ಚೌಕಸತೆಯಿಂದ ಪ್ಲ್ಯಾನ್ ರೂಪಿಸಿದ್ದ ಆರೋಪಿಗಳು, ತಮ್ಮ ಕಾರಿನ ಮುಂಭಾಗದ ನಂಬರ್ ಪ್ಲೇಟಿಗೆ ಕೆಸರು ಮೆತ್ತಿದ್ದರೆ, ಹಿಂಭಾಗದ ನಂಬರ್ ಪ್ಲೇಟಿಗೆ ಸ್ಟಿಕರ್ ಅಂಟಿಸಿ ಗುರುತಿಸದಂತೆ ಜಾಗ್ರತೆಯಿಂದ ಕಾರ್ಯಾಚರಣೆ ನಡೆಸಿದ್ದರು.
ಘಟನೆಯ ನಂತರ ಸಿರಿಗೆರೆ ಠಾಣೆಗೆ ಭೇಟಿ ನೀಡಿದ ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಚುರುಕು ಕ್ರಮ ಕೈಗೊಳ್ಳಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…