Categories: CrimeLatest

ಚಿತ್ರದುರ್ಗದಲ್ಲಿ ಖಾಕಿ ಹೆಸರಲ್ಲಿ ದರೋಡೆ: ನಕಲಿ ಪೊಲೀಸ್ ಅರೆಸ್ಟ್!

ಚಿತ್ರದುರ್ಗ ನಗರದಲ್ಲಿ ನಕಲಿ ಪೊಲೀಸ್ ಹೆಸರಿನಲ್ಲಿ ದರೋಡೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ದಿನಾಂಕ 05.04.2026 ರಂದು ಸುಲ್ತಾನಿಪುರ ಗ್ರಾಮದ ಸಲೀಂ ಎ (ತಂದೆ ಅಬ್ದುಲ್ಲಾ) ಅವರು ಚಿತ್ರದುರ್ಗ ನಗರದ ಅಜಾದ್ ಮಿಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಕಪ್ಪು ಬಣ್ಣದ ಟಿವಿಎಸ್ ರೈಡರ್ ಬೈಕ್ (ಕೆಎ-09-ಕೆಎ-1181)ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, “ನಾನು ಪೊಲೀಸ್, ಸ್ಟೇಷನ್‌ಗೆ ಹೋಗೋಣ” ಎಂದು ಬೆದರಿಕೆ ಹಾಕಿ ಸಲೀಂ ಅವರನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡಿದ್ದಾನೆ.

ನಂತರ ಅವರನ್ನು ನಗರದ ಎಪಿಎಂಸಿ ಮಾರ್ಕೆಟ್ ಒಳಗೆ ಕರೆದುಕೊಂಡು ಹೋಗಿ ಬೈಕ್ ನಿಲ್ಲಿಸಿ, ಕಪಾಳಕ್ಕೆ ಹೊಡೆದು ಬೆದರಿಸಿ, ಜೇಬಿನಲ್ಲಿದ್ದ ವಿವೋ ಕಂಪನಿಯ ಮೊಬೈಲ್ ಫೋನ್ ಹಾಗೂ ₹8,700 ನಗದು ಹಣವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಮೊ.ನಂ: 75/2026 ಪ್ರಕರಣವನ್ನು ಬಿ.ಎನ್.ಎಸ್-2023ರ ಕಲಂ 309(4) ಅಡಿ 11.04.2026 ರಂದು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.

ಆರೋಪಿಯನ್ನು ಪತ್ತೆಹಚ್ಚಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು (ಐಪಿಎಸ್) ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಡಿ.ವೈ.ಎಸ್.ಪಿ ಅರುಣ್ ನಾಗೇಗೌಡ ಅವರ ಉಸ್ತುವಾರಿಯಲ್ಲಿ, ಕೋಟೆ ಪೊಲೀಸ್ ಠಾಣೆಯ ಪಿ.ಐ ಪ್ರಕಾಶಗೌಡ ಪಾಟೀಲ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ತನಿಖೆ ಮುಂದುವರಿಸಿದ ಪೊಲೀಸರಿಗೆ 11.04.2026 ರಂದು ಚಿತ್ರದುರ್ಗ ನಗರದ ಜೆಎಂಐಟಿ ಸರ್ಕಲ್ ಬಳಿ ಬಿಗ್ ಬಾಸ್ ಹೋಟೆಲ್ ಹತ್ತಿರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ಸು ಸಿಕ್ಕಿದೆ. ಬಂಧಿತನನ್ನು ಚಿತ್ರದುರ್ಗ ನಗರದ ಐಯುಡಿಪಿ ಲೇಔಟ್ ನಿವಾಸಿ ರಮೇಶ್ (ತಂದೆ ರಂಗಸ್ವಾಮಿ) ಎಂದು ಗುರುತಿಸಲಾಗಿದೆ.

ಬಂಧನದ ವೇಳೆ ಆರೋಪಿಯ ಬಳಿಯಿಂದ ದೂರುದಾರನ ಮೊಬೈಲ್ ಫೋನ್ ಸೇರಿದಂತೆ ಇನ್ನೂ 4 ಮೊಬೈಲ್‌ಗಳು, ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಹಾಗೂ “ಕ್ರೈಂ ಸ್ಟೋರಿ ನ್ಯೂಸ್ 24×7” ಮತ್ತು “ಕರ್ನಾಟಕ ಪತ್ರಿಕಾ ಶಕ್ತಿ ಕೇಂದ್ರ” ಎಂಬ ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ನಂತರ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago