Latest

ಅರಣ್ಯದಲ್ಲಿ ಸೆರೆಬಿದ್ದ ರೌಡಿ: ಪೋಲೀಸರ ಮೇಲೆ ಹಲ್ಲೆ, ಫೈರಿಂಗ್ ಬಳಿಕ ಬಂಧನ

ಯಲ್ಲಾಪುರ (ರಾಮನಗರ): ಹದಿನಾರು ಗಂಭೀರ ಪ್ರಕರಣಗಳಲ್ಲಿ ಅಂತರಜಿಲ್ಲಾ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ಪೋಲೀಸರು ಫೈರಿಂಗ್ ನಡೆಸಿ ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.

ಯಲ್ಲಾಪುರ–ಹಳಿಯಾಳ ರಾಜ್ಯ ಹೆದ್ದಾರಿಯ ಸಮೀಪದ ಕಣ್ಣಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪ್ರವೀಣ್ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಯು ಪೋಲೀಸರನ್ನು ಕಂಡು ಚಾಕು ಮತ್ತು ಕಲ್ಲುಗಳಿಂದ ಪಿಎಸ್‌ಐ ಮಹಾಂತೇಶ ನಾಯಕ ಹಾಗೂ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಎಂದು ತಿಳಿದುಬಂದಿದೆ.

ಆತ್ಮರಕ್ಷಣೆಗೆ ಫೈರಿಂಗ್ ನಡೆಸಿದ ಪಿಎಸ್‌ಐ ಮಹಾಂತೇಶ ನಾಯಕ, ಮೊದಲು ಗಾಳಿಯಲ್ಲಿ ಎರಡು ಸುತ್ತು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿ ಹಿಂಜರಿಯದೇ ದಾಳಿ ಮುಂದುವರೆಸಿದ್ದ ಹಿನ್ನೆಲೆಯಲ್ಲಿ ಆತನ ಬಲಗಾಲಿನ ಮಂಡಿಯ ಕೆಳಭಾಗಕ್ಕೆ ಗುಂಡು ಹಾರಿಸಿ ಕಬಳಿಸಲಾಗಿದೆ. ಗಾಯಗೊಂಡಿರುವ ಪ್ರವೀಣ್‌ನನ್ನು ತಕ್ಷಣ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ಮಹಾಂತೇಶ ನಾಯಕ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಧಿತನ ವಿರುದ್ಧ ರಾಮನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಒಟ್ಟು 16ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ದಾಂಡೇಲಿ ಉಪ ವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ, ಜೋಯಿಡಾದ ಸಿಪಿಐ ಚಂದ್ರಶೇಖರ ಹರಿಹರ ಹಾಗೂ ಪಿಎಸ್‌ಐ ಮಹಾಂತೇಶ ನಾಯಕ ನೇತೃತ್ವದಲ್ಲಿ ತಂಡವೊಂದು ಯಶಸ್ವಿಯಾಗಿ ಮುನ್ನಡೆಸಿದೆ.

ಘಟನೆಯ ಬಳಿಕ ಜಿಲ್ಲೆ ಎಸ್‌ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಲಾಗಿದೆ. ವರದಿ: ಮಂಜುನಾಥ ಎಫ್ ಎಚ್

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

1 hour ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

1 hour ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

2 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago