Latest

ಅರಣ್ಯದಲ್ಲಿ ಸೆರೆಬಿದ್ದ ರೌಡಿ: ಪೋಲೀಸರ ಮೇಲೆ ಹಲ್ಲೆ, ಫೈರಿಂಗ್ ಬಳಿಕ ಬಂಧನ

ಯಲ್ಲಾಪುರ (ರಾಮನಗರ): ಹದಿನಾರು ಗಂಭೀರ ಪ್ರಕರಣಗಳಲ್ಲಿ ಅಂತರಜಿಲ್ಲಾ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ಪೋಲೀಸರು ಫೈರಿಂಗ್ ನಡೆಸಿ ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.

ಯಲ್ಲಾಪುರ–ಹಳಿಯಾಳ ರಾಜ್ಯ ಹೆದ್ದಾರಿಯ ಸಮೀಪದ ಕಣ್ಣಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪ್ರವೀಣ್ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಯು ಪೋಲೀಸರನ್ನು ಕಂಡು ಚಾಕು ಮತ್ತು ಕಲ್ಲುಗಳಿಂದ ಪಿಎಸ್‌ಐ ಮಹಾಂತೇಶ ನಾಯಕ ಹಾಗೂ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಎಂದು ತಿಳಿದುಬಂದಿದೆ.

ಆತ್ಮರಕ್ಷಣೆಗೆ ಫೈರಿಂಗ್ ನಡೆಸಿದ ಪಿಎಸ್‌ಐ ಮಹಾಂತೇಶ ನಾಯಕ, ಮೊದಲು ಗಾಳಿಯಲ್ಲಿ ಎರಡು ಸುತ್ತು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿ ಹಿಂಜರಿಯದೇ ದಾಳಿ ಮುಂದುವರೆಸಿದ್ದ ಹಿನ್ನೆಲೆಯಲ್ಲಿ ಆತನ ಬಲಗಾಲಿನ ಮಂಡಿಯ ಕೆಳಭಾಗಕ್ಕೆ ಗುಂಡು ಹಾರಿಸಿ ಕಬಳಿಸಲಾಗಿದೆ. ಗಾಯಗೊಂಡಿರುವ ಪ್ರವೀಣ್‌ನನ್ನು ತಕ್ಷಣ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ಮಹಾಂತೇಶ ನಾಯಕ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಧಿತನ ವಿರುದ್ಧ ರಾಮನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಒಟ್ಟು 16ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ದಾಂಡೇಲಿ ಉಪ ವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ, ಜೋಯಿಡಾದ ಸಿಪಿಐ ಚಂದ್ರಶೇಖರ ಹರಿಹರ ಹಾಗೂ ಪಿಎಸ್‌ಐ ಮಹಾಂತೇಶ ನಾಯಕ ನೇತೃತ್ವದಲ್ಲಿ ತಂಡವೊಂದು ಯಶಸ್ವಿಯಾಗಿ ಮುನ್ನಡೆಸಿದೆ.

ಘಟನೆಯ ಬಳಿಕ ಜಿಲ್ಲೆ ಎಸ್‌ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಲಾಗಿದೆ. ವರದಿ: ಮಂಜುನಾಥ ಎಫ್ ಎಚ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago