ಯಲ್ಲಾಪುರ (ರಾಮನಗರ): ಹದಿನಾರು ಗಂಭೀರ ಪ್ರಕರಣಗಳಲ್ಲಿ ಅಂತರಜಿಲ್ಲಾ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ಪೋಲೀಸರು ಫೈರಿಂಗ್ ನಡೆಸಿ ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.
ಯಲ್ಲಾಪುರ–ಹಳಿಯಾಳ ರಾಜ್ಯ ಹೆದ್ದಾರಿಯ ಸಮೀಪದ ಕಣ್ಣಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪ್ರವೀಣ್ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಯು ಪೋಲೀಸರನ್ನು ಕಂಡು ಚಾಕು ಮತ್ತು ಕಲ್ಲುಗಳಿಂದ ಪಿಎಸ್ಐ ಮಹಾಂತೇಶ ನಾಯಕ ಹಾಗೂ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಎಂದು ತಿಳಿದುಬಂದಿದೆ.
ಆತ್ಮರಕ್ಷಣೆಗೆ ಫೈರಿಂಗ್ ನಡೆಸಿದ ಪಿಎಸ್ಐ ಮಹಾಂತೇಶ ನಾಯಕ, ಮೊದಲು ಗಾಳಿಯಲ್ಲಿ ಎರಡು ಸುತ್ತು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿ ಹಿಂಜರಿಯದೇ ದಾಳಿ ಮುಂದುವರೆಸಿದ್ದ ಹಿನ್ನೆಲೆಯಲ್ಲಿ ಆತನ ಬಲಗಾಲಿನ ಮಂಡಿಯ ಕೆಳಭಾಗಕ್ಕೆ ಗುಂಡು ಹಾರಿಸಿ ಕಬಳಿಸಲಾಗಿದೆ. ಗಾಯಗೊಂಡಿರುವ ಪ್ರವೀಣ್ನನ್ನು ತಕ್ಷಣ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ಮಹಾಂತೇಶ ನಾಯಕ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಧಿತನ ವಿರುದ್ಧ ರಾಮನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಒಟ್ಟು 16ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ದಾಂಡೇಲಿ ಉಪ ವಿಭಾಗದ ಡಿವೈಎಸ್ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ, ಜೋಯಿಡಾದ ಸಿಪಿಐ ಚಂದ್ರಶೇಖರ ಹರಿಹರ ಹಾಗೂ ಪಿಎಸ್ಐ ಮಹಾಂತೇಶ ನಾಯಕ ನೇತೃತ್ವದಲ್ಲಿ ತಂಡವೊಂದು ಯಶಸ್ವಿಯಾಗಿ ಮುನ್ನಡೆಸಿದೆ.
ಘಟನೆಯ ಬಳಿಕ ಜಿಲ್ಲೆ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಲಾಗಿದೆ. ವರದಿ: ಮಂಜುನಾಥ ಎಫ್ ಎಚ್
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…