ಬೆಳಗಾವಿ: ಗಡಿಪಾರು ಆದೇಶದಡಿ ಧಾರವಾಡ ಜೈಲಿನಲ್ಲಿದ್ದ ರೌಡಿಶೀಟರ್ ಒಬ್ಬರು ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸಮೀಪ ನಡೆದಿದೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮೃತನನ್ನು ಗೋಕಾಕ್ ಫಾಲ್ಸ್ ಸಮೀಪದ ಮಾಣಿಕವಾಡಿ ಗ್ರಾಮದ ಮುತ್ತುಸ್ವಾಮಿ ಹೃದಯರಾಜ ಪಾಸ್ಕಲ್ (30) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಗಡಿಪಾರು ಆದೇಶದಡಿ ಕೆಲ ದಿನಗಳಿಂದ ಧಾರವಾಡ ಜೈಲಿನಲ್ಲಿದ್ದ ಮುತ್ತುಸ್ವಾಮಿ ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಹೊರಬಂದ ಬಳಿಕ ಸ್ನೇಹಿತರೊಂದಿಗೆ ಹಿಡಕಲ್ ಡ್ಯಾಂ ಪ್ರದೇಶಕ್ಕೆ ತೆರಳಿದ್ದ ವೇಳೆ, ಮೊದಲೇ ಹೊಂಚುಹಾಕಿ ಕಾಯುತ್ತಿದ್ದ ಎನ್ನಲಾದ ವಿರೋಧಿ ಗುಂಪು ಏಕಾಏಕಿ ದಾಳಿ ನಡೆಸಿದೆ.
ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಮುತ್ತುಸ್ವಾಮಿಯನ್ನು ರಕ್ತದ ಮಡುವಿನಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿ ಆರಂಭವಾಗುತ್ತಿದ್ದಂತೆಯೇ ಅವರೊಂದಿಗೆ ಇದ್ದ ಸ್ನೇಹಿತರು ಸ್ಥಳದಿಂದ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುತ್ತುಸ್ವಾಮಿಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಮಕನಮರಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೊಲೆಗೆ ಹಳೆಯ ವೈಷಮ್ಯ ಕಾರಣವೇ ಎಂಬುದು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಗಾಂಧಿನಗರ: ವಿವಾಹಿತ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಗುಪ್ತವಾಗಿ ಚಿತ್ರೀಕರಿಸಿ, ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದನೆಂಬ ಆರೋಪದ…
ಬೆಂಗಳೂರು: ಪ್ರೀತಿಸಿ ಮದುವೆಯಾದ ಬಳಿಕ ಪತಿಯ ವರ್ತನೆಯಿಂದ ಮನನೊಂದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ…
ಹರಿಯಾಣ: ಹರಿಯಾಣದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಒಂದು ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಮಹಮದ್…
ಬೆಂಗಳೂರು: ಸಾರ್ವಜನಿಕ ಸಾರಿಗೆ ಬಸ್ನಲ್ಲಿ ಬಾಕಿ ಚಿಲ್ಲರೆ ಹಣ ಕೇಳಿದ ಪ್ರಯಾಣಿಕನೊಂದಿಗೆ ನಿರ್ವಾಹಕ (ಕಂಡಕ್ಟರ್) ಜಗಳವಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ…
ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ತನ್ನ ಪರವಾಗಿ ಅನುಕೂಲಕರ ತೀರ್ಪು ಬರಬೇಕೆಂಬ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಕುರ್ಚಿಗೆ ಮಾಟ-ಮಂತ್ರ ಮಾಡಿರುವ ಆರೋಪದ ಘಟನೆ…
ಬೆಂಗಳೂರು: ರಾಜಧಾನಿಯ ರಿಯಲ್ ಎಸ್ಟೇಟ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಸಂಚಲನ ಮೂಡಿಸಿರುವ ಪ್ರಕರಣವೊಂದನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಶ್ರೀ ಆದಿಚುಂಚನಗಿರಿ…