ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಪಿ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.
ಸ್ಥಳೀಯ ಮೂಲಗಳ ಪ್ರಕಾರ, ‘ಮಚ್ ಮಂಜ’ ಎಂದು ಪರಿಚಿತನಾಗಿರುವ ರೌಡಿಶೀಟರ್ ಮೌರ್ಯ ಹೋಟೆಲ್ ಸಮೀಪ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ. ಬಳಿಕ ಹೋಟೆಲ್ ಎದುರಿನ ಬೀಡಾ ಅಂಗಡಿ ಬಳಿ ರಾಘವೇಂದ್ರ ದತ್ತಾ ಬಾಂದೇಕರ್ ಹಾಗೂ ಮಂಜುನಾಥ್ ಸುಬ್ರಾಯ ಅವರೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಗಲಾಟೆಯನ್ನು ತಡೆಯಲು ಮುಂದಾದ ಹೋಟೆಲ್ ಸಿಬ್ಬಂದಿ ಸದಾಶಿವ ಪೂಜಾರಿ ಅವರ ಮೇಲೂ ಆರೋಪಿ ಹಲ್ಲೆ ನಡೆಸಿದ್ದರಿಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಯತ್ನಿಸಿದರೂ, ಮದ್ಯದ ಅಮಲಿನಲ್ಲಿದ್ದ ಆರೋಪಿ ಪೊಲೀಸರ ಮಾತನ್ನು ಲೆಕ್ಕಿಸದೇ ಉದ್ಧಟತನ ಪ್ರದರ್ಶಿಸಿದ್ದಾನೆ. ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿ, ಗುದ್ದಾಟಕ್ಕೆ ಇಳಿದಿದ್ದಾನೆ.
ಇದರಲ್ಲೂ ತೃಪ್ತನಾಗದ ಆತ, ತನ್ನ ಬಟ್ಟೆಗಳನ್ನು ಕಳಚಿಕೊಂಡು ಅಸಭ್ಯವಾಗಿ ವರ್ತಿಸಿದ್ದು, ಪೊಲೀಸ್ ಸಿಬ್ಬಂದಿಗಳಾದ ಅಶೋಕ ಹಾಗೂ ಹನುಮಂತ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಅಲ್ಲದೆ, ಪೊಲೀಸ್ ವಾಹನದ ಮುಂದೆ ಮಲಗಿ ಕಾರ್ಯಾಚರಣೆಗೆ ಅಡ್ಡಿಪಡಿಸಿ ಸಾಕಷ್ಟು ಹೊತ್ತು ಹೈಡ್ರಾಮಾ ನಡೆಸಿದ್ದಾನೆ.
ಕೊನೆಗೆ ಪೊಲೀಸರು ಹರಸಾಹಸ ಪಟ್ಟು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಪುಂಡಾಟ ಮೆರೆದಿರುವುದು ಹಾಗೂ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಸೇನೆಯ (IAF) ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ…
ಬಾಗಲಕೋಟೆ: ತಾಲ್ಲೂಕಿನ ನಾಯನೇಗಲಿ ಗ್ರಾಮದಲ್ಲಿ ಪಿಕೆಪಿಎಸ್ ಬ್ಯಾಂಕ್ನ ನೂತನ ಕಚೇರಿಯನ್ನು ಇಂದು ಬೆಳಿಗ್ಗೆ 9.30 ಗಂಟೆಗೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ…
ನವದೆಹಲಿ: ದೇಶಾದ್ಯಂತ ಔಷಧಿಗಳ ಮಾರಾಟ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್ಗಳನ್ನು…
ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್…
ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೃಹತ್…
ಗೋಕಾಕ: ಅನೈತಿಕ ಸಂಬಂಧಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆಯನ್ನು ಕೊಲೆ ಮಾಡಿ, ನಂತರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ…