ಬೆಂಗಳೂರು: ನಗರದ ಜೆ.ಪಿ. ನಗರದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ರಾಜುಬಾಯ್ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಸಾರ್ವಜನಿಕರ ಕಣ್ಣೆದುರೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕ ಸೃಷ್ಟಿಸಿದೆ.
ಪ್ರಗತಿಪುರ ನಿವಾಸಿಯಾಗಿದ್ದ ರಾಜುಬಾಯ್ ಮೇಲೆ ಸಂಜೆ ಸುಮಾರು 5.30ರ ವೇಳೆಗೆ ಐಜಿ ಸರ್ಕಲ್ ಸಮೀಪ ದಾಳಿ ನಡೆದಿದೆ. ಟೀ ಕುಡಿದು ಹಿಂದಿರುಗುತ್ತಿದ್ದ ವೇಳೆ ಹೊಂಚು ಹಾಕಿ ಕುಳಿತಿದ್ದ ನಾಲ್ಕೈದು ಮಂದಿ ದುಷ್ಕರ್ಮಿಗಳು ಏಕಾಏಕಿ ಲಾಂಗ್ ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಸಂಜೆ ವೇಳೆ ರಸ್ತೆಯಲ್ಲಿ ವಾಹನಗಳ ಸಂಚಾರ ಮತ್ತು ಜನರ ಓಡಾಟ ಹೆಚ್ಚಿದ್ದರೂ, ದುಷ್ಕರ್ಮಿಗಳು ಯಾವುದೇ ಭಯವಿಲ್ಲದೆ ರಾಜುಬಾಯ್ನನ್ನು ಅಟ್ಟಾಡಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ನಡೆದ ಕ್ಷಣಗಳಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೃಶ್ಯ ಕಂಡ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಮೃತ ರಾಜುಬಾಯ್ ಸುಮಾರು ಹತ್ತು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೆಯ ವೈಷಮ್ಯವೇ ಈ ಹತ್ಯೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಜೆ.ಪಿ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…