Crime

“ಗುಬ್ಬಿಯಲ್ಲಿ 15 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಅಂತರ್-ರಾಜ್ಯ ಕಳ್ಳರ ಬಂಧನ, 16 ಲಕ್ಷ ಮೌಲ್ಯದ ಸ್ವತ್ತು ವಶ”

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ 15 ಲಕ್ಷ ನಗದು ಕಳ್ಳತನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಅಂತರ್-ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ದಿನಾಂಕ 07-01-2025, ರಾತ್ರಿ 07:30 ಗಂಟೆಗೆ ಶಿವರಾಜು ಎಂಬುವವರು ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದರು. ಅವರ ಹೇಳಿಕೆ ಪ್ರಕಾರ, ಮಧ್ಯಾಹ್ನ 03:10 ಗಂಟೆಗೆ ಅವರು ನಿಟ್ಟೂರಿನ ಎಸ್.ಬಿ.ಎಂ ಬ್ಯಾಂಕ್‌ನಿಂದ 15 ಲಕ್ಷ ರೂ. ನಗದು ಡ್ರಾ ಮಾಡಿ, ತಮ್ಮ ಕಾರಿನಲ್ಲಿ ಇಟ್ಟು, ಗುಬ್ಬಿ ಎಪಿಎಂಸಿ ಕಛೇರಿ ಮುಂಭಾಗ ನಿಲ್ಲಿಸಿದ್ದರು. ಕಛೇರಿಯಲ್ಲಿ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ, ಕಾರಿನಲ್ಲಿದ್ದ 15 ಲಕ್ಷ ನಗದು ಹಾಗೂ ಇತರ ದಾಖಲೆಗಳನ್ನು ಯಾರೋ ಕಳ್ಳರು ಕದ್ದೊಯ್ದಿದ್ದರು.

ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಮೊ.ನಂ. 11/2025, ಕಲಂ 303(2) ಬಿಎನ್‌ಎಸ್) ದಾಖಲಿಸಿಕೊಂಡು ತನಿಖೆ ಆರಂಭಿಸಲಾಯಿತು.

ಬಂಧಿತರ ವಿವರ

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ, ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ವಿ. ಮರಿಯಪ್ಪ ಮತ್ತು ಬಿ.ಎಸ್. ಅಬ್ದುಲ್ ಖಾದರ್, ಸಿರಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಕೆ. ಶೇಖರ್, ಗುಬ್ಬಿ ವೃತ್ತದ ಸಿಪಿಐ ರಾಘವೇಂದ್ರ ಟಿ.ಆರ್ ನೇತೃತ್ವದಲ್ಲಿ ತನಿಖಾ ತಂಡ ಕಾರ್ಯಚರಣೆ ನಡೆಸಿತು.

ಈ ತಂಡ ಗುಬ್ಬಿ ಪೊಲೀಸ್ ಪಿಎಸ್‌ಐ-1 ಸುನೀಲ್ ಕುಮಾರ್ ಜಿ.ಕೆ, ಸಿಬ್ಬಂದಿ ನವೀನ್ ಕುಮಾರ್, ವಿಜಯಕುಮಾರ್, ಮಧುಸೂಧನ್ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿ ನರಸಿಂಹರಾಜು ಅವರ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಗಳು

1. ಶಿವ ಜಿ. (44 ವರ್ಷ), ಮೇಸ್ತ್ರಿ ಕೆಲಸ, ಓಜಿಕುಪ್ಪಂ, ಕಾವೇಟಿಪುರಂ, ನಗರಿ ಮಂಡಲ್, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ

2. ಸುಬ್ರಮಣ್ಯಂ @ ಮಣಿ (38 ವರ್ಷ), ಕೂಲಿ ಕೆಲಸ, ಓಜಿಕುಪ್ಪಂ, ಕಾವೇಟಿಪುರಂ, ನಗರಿ ಮಂಡಲ್, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ

ಪತ್ತೆಯಾದ ಸ್ವತ್ತುಗಳು

ಬಂಧಿತರಿಂದ 13.60 ಲಕ್ಷ ನಗದು ಹಾಗೂ ಒಂದು ಚಿನ್ನದ ಬ್ರಾಸ್ ಲೈಟ್ ಸೇರಿ ಒಟ್ಟು 16 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಅಂತರ ರಾಜ್ಯ ಅಪರಾಧಿಗಳು

ಈ ಆರೋಪಿತರು ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವರು:

  • ಗುಬ್ಬಿ ಪೊಲೀಸ್ ಠಾಣೆ – 01 ಪ್ರಕರಣ
  • ಸಿರಾ ಪೊಲೀಸ್ ಠಾಣೆ – 02 ಪ್ರಕರಣ
  • ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ – 01 ಪ್ರಕರಣ
  • ನೊಣವಿಕೆರೆ ಪೊಲೀಸ್ ಠಾಣೆ – 01 ಪ್ರಕರಣ

ಈ ಎಲ್ಲಾ 5 ಪ್ರಕರಣಗಳಲ್ಲಿಯೂ ಆರೋಪಿತರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಆರೋಪಿಗಳ ಪತ್ತೆಗೆ ಹುಡುಕಾಟ

ಈ ಪ್ರಕರಣದಲ್ಲಿ ಇನ್ನೂ ಮೂವರು ಅಂಕಯ್ಯ, ಕಿರಣ್ ಮತ್ತು ರಾಜ್ಯಶೇಖರಯ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಅವರ ಪತ್ತೆ ಕಾರ್ಯವನ್ನು ಮುಂದುವರೆಸಿದ್ದಾರೆ.

ಪೊಲೀಸ್ ತಂಡಕ್ಕೆ ಪ್ರಶಂಸೆ

ಈ ಯಶಸ್ವಿ ಕಾರ್ಯಾಚರಣೆಗೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ, ಐ.ಪಿ.ಎಸ್ ಅವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago