ಬೆಂಗಳೂರು: ‘ಇ-ಸ್ವತ್ತು’ ಮಂಜೂರಿಗಾಗಿ ಕೇವಲ 2,000 ರೂಪಾಯಿ ಲಂಚ ಪಡೆದಿದ್ದ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯತ್ ಪಿಡಿಒ ಹನುಮಂತಪ್ಪ ಹಂಚಿನಮನೆಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ಘೋಷಿಸಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಚನ್ನೇಪುರ ಗ್ರಾಮ ಪಂಚಾಯತ್ನ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ, ಮಂಗಳಾಬಾಯಿ ಎಂಬುವವರಿಂದ 14×100 ಅಡಿಯ ಅಳತೆಯ ಮನೆಯ ಖರೀದಿ ಪ್ರಕ್ರಿಯೆಗೆ ‘ಇ-ಸ್ವತ್ತು’ ಪ್ರಮಾಣ ಪತ್ರ ನೀಡುವ ಮೊದಲು ಹಣದ ಬೇಡಿಕೆ ಇಟ್ಟಿದ್ದರು. ಈ ವಿಷಯವನ್ನು ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ್ ಬಿ.ಎಚ್. ಲೋಕಾಯುಕ್ತಕ್ಕೆ ದೂರು ನೀಡಿದರು.
ರಂಗನಾಥನಿಂದ 2,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರವು 2023ರ ಜುಲೈ 31ರಂದು, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ 1957ರ ನಿಯಮ 14(ಎ) ಅಡಿಯಲ್ಲಿ ತನಿಖೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಒಪ್ಪಿಸಿತ್ತು.
ಫೆಬ್ರವರಿ 18ರಂದು ಉಪ ಲೋಕಾಯುಕ್ತರು ತಮ್ಮ ವರದಿಯಲ್ಲಿ ಹನುಮಂತಪ್ಪ ಅವರು ನಾಗರಿಕ ಸೇವಾ ನಡವಳಿಕೆ ನಿಯಮಗಳ 1966ರ ನಿಯಮ 3(1)(i), (ii), (iii) ಉಲ್ಲಂಘಿಸಿ ಅನುಚಿತ ವರ್ತನೆ ತೋರಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದರು. ಇದರಂತೆ ಸರ್ಕಾರವು 2024ರ ಮಾರ್ಚ್ 10ರಂದು ಹನುಮಂತಪ್ಪ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತು.
ಅದರ ಉತ್ತರಾದಲ್ಲಿ ಹನುಮಂತಪ್ಪ ಆರೋಪಗಳನ್ನು ನಿರಾಕರಿಸಿ, ತನಿಖೆಯಲ್ಲಿ ನ್ಯಾಯಬದ್ಧತೆ ಪಾಲನೆ ಆಗಿಲ್ಲ ಎಂದು ವಿವರಣೆ ನೀಡಿದರು. ಆದರೆ ಸರ್ಕಾರ, ವಿಚಾರಣಾ ವರದಿ ಪರಿಶೀಲಿಸಿದ ನಂತರ, ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದು, ಅವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿಗೆ ಒಳಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…